ನಗರದ ವರ್ತೂರ್ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಚಿರತೆಯೊಂದು ನುಗ್ಗಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರರನ್ನು ಕಚ್ಚಿಗಾಯಗೊಳಿಸಿದ ಘಟನೆ ವರದಿಯಾಗಿದೆ.
ಆರಂಭದಲ್ಲಿ ವಿಬ್ಗಯಾರ್ ಶಾಲೆಯ ಸಿಸಿಟಿವಿಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಚಿರತೆ ಶಾಲೆಯನ್ನು ಪ್ರವೇಶಿಸುತ್ತಿರುವ ದೃಶ್ಯ ಸೆರೆಯಾಗಿದೆ. ಅದೃಷ್ಟವಶಾತ್ ಅಂದರೆ ರವಿವಾರವಾಗಿದ್ದರಿಂದ ಶಾಲೆಯನ್ನು ಮುಚ್ಚಲಾಗಿತ್ತು.
ಶಾಲಾ ಅಡಳಿತ ಮಂಡಳಿ ಕೂಡಲೇ ಅರಣ್ಯಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹಗಲು ಹೊತ್ತಿನಲ್ಲಿ ಶಾಲೆಯಿಂದ ಪರಾರಿಯಾಗಿದ್ದ ಚಿರತೆ, ಹತ್ತಿರವಿರುವ ಪೊದೆಗಳಲ್ಲಿ ಅಡಗಿಕೊಂಡಿತ್ತು ಎನ್ನಲಾಗಿದೆ.
ಅರಣ್ಯಾಧಿಕಾರಿಗಳು ಪ್ರಜ್ಞೆ ತಪ್ಪಿಸುವ ಗುಂಡಿನ ದಾಳಿ ನಡೆಸಿ ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಿಡಿದ ಚಿರತೆಯನ್ನು ಬನ್ನೇರುಘಟ್ಟ ಬಯಾಲಾಜಿಕಲ್ ಪಾರ್ಕ್ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.