Webdunia - Bharat's app for daily news and videos

Install App

ಹೆಂಡತಿಯ ಅಕ್ರಮ ಸಂಬಂಧ ತಿಳಿದು ಪತಿ ಆಕೆಗೆ ಮಾಡಿದನ್ನು ಕೇಳಿದ್ರೆ ಬೆಚ್ಚಿ ಬೀಳ್ತಿರಾ

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:37 IST)
ಕೋಲಾರ : ಎರಡನೇ ಪತ್ನಿಯು ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದ ವ್ಯಕ್ತಿಯೊಬ್ಬ ಆಕೆಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.


ಸದ್ದಾಂ ಹುಸೇನ್ ಅಲಿಯಾಸ್ ಅಜೀಜ್ (27 ವರ್ಷ) ಆರೋಪಿಯಾಗಿದ್ದು,  ಬೆಂಗಳೂರಿನ ನೀಲಸಂದ್ರ ನಿವಾಸಿ ರೋಷಿಣಿ ಖಾನಂ ಕೊಲೆಯಾದ ಪತ್ನಿಯಾಗಿದ್ದಾಳೆ. ಮೂಲತಃ ಶ್ರೀನಿವಾಸಪುರ ಪಟ್ಟಣದ ಗಫರ್ ಖಾನ್ ಮೊಹಲ್ಲಾದ ನಿವಾಸಿಯಾಗಿರುವ ಅಜೀಜ್ ಗೆ ತನ್ನ 2ನೇ ಹೆಂಡತಿಯು ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದು ಆಕೆಯನ್ನು ಕೊಲೆ ಮಾಡಬೇಕೆಂದು ನಿರ್ಧರಿಸಿ ಸಂಚು ಮಾಡಿ ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮುಲ್ಲಕ್ಕೆ ಹೆಂಡತಿಯನ್ನು ಬೈಕಿನಲ್ಲಿ ಕರೆದುಕೊಂಡು ಬಂದಿದ್ದಾನೆ. ಬಳಿಕ ಪತ್ನಿ ರೋಷಿಣಿ ಖಾನಂಗೆ ಪ್ರಜ್ಞೆ ತಪ್ಪಿಸಿ ಬರ್ಬರವಾಗಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.


ನಂತರ ಹೆಂಡತಿಯ ತಲೆಯನ್ನು ತೆಗೆದುಕೊಂಡು ಬಂದು ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಅಲ್ಲದೆ ಠಾಣೆಯಲ್ಲೇ ಪತ್ನಿಯ ರುಂಡವನ್ನು ಹಿಡಿದು ಕೊಂಡು ಚಿನ್ನಾ, ರನ್ನಾ ಎನ್ನುತ್ತಾ ಮುದ್ದಾಡಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆತನ ಕೈಯಲಿದ್ದ ಕತ್ತಿ ಹಾಗೂ ಮಹಿಳೆಯ ರುಂಡವನ್ನು ವಶಪಡಿಸಿಕೊಂಡಿದ್ದಾರೆ.


ಅಲ್ಲದೇ ಪ್ರಕರಣವು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪೊಲೀಸರು ಕೆಂಚಾರಲಹಳ್ಳಿ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೆಂಚಾರಲಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments