Webdunia - Bharat's app for daily news and videos

Install App

ಹೆಂಡತಿಯ ಅಕ್ರಮ ಸಂಬಂಧ ತಿಳಿದು ಪತಿ ಆಕೆಗೆ ಮಾಡಿದನ್ನು ಕೇಳಿದ್ರೆ ಬೆಚ್ಚಿ ಬೀಳ್ತಿರಾ

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:37 IST)
ಕೋಲಾರ : ಎರಡನೇ ಪತ್ನಿಯು ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದ ವ್ಯಕ್ತಿಯೊಬ್ಬ ಆಕೆಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.


ಸದ್ದಾಂ ಹುಸೇನ್ ಅಲಿಯಾಸ್ ಅಜೀಜ್ (27 ವರ್ಷ) ಆರೋಪಿಯಾಗಿದ್ದು,  ಬೆಂಗಳೂರಿನ ನೀಲಸಂದ್ರ ನಿವಾಸಿ ರೋಷಿಣಿ ಖಾನಂ ಕೊಲೆಯಾದ ಪತ್ನಿಯಾಗಿದ್ದಾಳೆ. ಮೂಲತಃ ಶ್ರೀನಿವಾಸಪುರ ಪಟ್ಟಣದ ಗಫರ್ ಖಾನ್ ಮೊಹಲ್ಲಾದ ನಿವಾಸಿಯಾಗಿರುವ ಅಜೀಜ್ ಗೆ ತನ್ನ 2ನೇ ಹೆಂಡತಿಯು ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದು ಆಕೆಯನ್ನು ಕೊಲೆ ಮಾಡಬೇಕೆಂದು ನಿರ್ಧರಿಸಿ ಸಂಚು ಮಾಡಿ ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮುಲ್ಲಕ್ಕೆ ಹೆಂಡತಿಯನ್ನು ಬೈಕಿನಲ್ಲಿ ಕರೆದುಕೊಂಡು ಬಂದಿದ್ದಾನೆ. ಬಳಿಕ ಪತ್ನಿ ರೋಷಿಣಿ ಖಾನಂಗೆ ಪ್ರಜ್ಞೆ ತಪ್ಪಿಸಿ ಬರ್ಬರವಾಗಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.


ನಂತರ ಹೆಂಡತಿಯ ತಲೆಯನ್ನು ತೆಗೆದುಕೊಂಡು ಬಂದು ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಅಲ್ಲದೆ ಠಾಣೆಯಲ್ಲೇ ಪತ್ನಿಯ ರುಂಡವನ್ನು ಹಿಡಿದು ಕೊಂಡು ಚಿನ್ನಾ, ರನ್ನಾ ಎನ್ನುತ್ತಾ ಮುದ್ದಾಡಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆತನ ಕೈಯಲಿದ್ದ ಕತ್ತಿ ಹಾಗೂ ಮಹಿಳೆಯ ರುಂಡವನ್ನು ವಶಪಡಿಸಿಕೊಂಡಿದ್ದಾರೆ.


ಅಲ್ಲದೇ ಪ್ರಕರಣವು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪೊಲೀಸರು ಕೆಂಚಾರಲಹಳ್ಳಿ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೆಂಚಾರಲಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments