Webdunia - Bharat's app for daily news and videos

Install App

ಅಮುಲ್ ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ : ಸಿ.ಟಿ ರವಿ

Webdunia
ಭಾನುವಾರ, 9 ಏಪ್ರಿಲ್ 2023 (11:10 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಆದ್ರೆ ಅಮುಲ್ ಭಾರತದ ಬ್ರ್ಯಾಂಡ್, ಭಾರತದಲ್ಲೇ ಮಾರಾಟ ಮಾಡಿದ್ರೆ ಇವರಿಗೇನು ತೊಂದರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿ ಕಾರಿದ್ದಾರೆ.

ನಂದಿನಿ-ಅಮುಲ್ ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, ಇಲ್ಲೇ ಮಾರಾಟ ಮಾಡಿದ್ರೆ ಇವರಿಗೇನು ತೊಂದರೆ. ಇದೆಂಥ ಸೋತವರ ಗುಂಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಟ್ವೀಟ್ ಮೂಲಕವೂ ಆಕ್ಷೇಪ ವ್ಯಕ್ತಪಡಿಸಿರುವ ಸಿ.ಟಿ ರವಿ, ಕಾಂಗ್ರೆಸ್ ನಮ್ಮ ತಾಯಂದಿರು ಹಾಗೂ ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು. ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನ ಮಾರಾಟ ಮಾಡಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments