Webdunia - Bharat's app for daily news and videos

Install App

ಟೀ ಅಂಗಡಿ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಆದದ್ದಾದರೂ ಏನು?

Webdunia
ಸೋಮವಾರ, 23 ಜುಲೈ 2018 (14:59 IST)
ಆ ಮಹಿಳೆ ಎಂದಿನಂತೆ ನಸುಕಿನ ಜಾವ ತಮ್ಮ ಮನೆ, ಟೀ ಅಂಗಡಿ ಮುಂದೆ ಕಸ ಗುಡಿಸುತ್ತಿದ್ದಳು. ಆದರೆ ಇಂದೆಕೋ ಆಕೆಯ ಗ್ರಹಚಾರ ಸರಿಯಾಗಿದ್ದಿಲ್ಲ ಎನಿಸುತ್ತದೆ. ಬೆಳ್ಳಂಬೆಳಗ್ಗೆ ಆ ಮಹಿಳೆ ಗಾಬರಿಯಾಗಿದ್ದಾಳೆ. ಅಂಥದ್ದೇನಾಯ್ತು? ಎನ್ನೋದನ್ನು ತಿಳಿಯಲು ಮುಂದೆ ಓದಿ…

ಬೈಕ್ ನಲ್ಲಿ ಬಂದ ಅಪರಿಚಿರಿಬ್ಬರು ಟೀ ಅಂಗಡಿಯ ಮುಂದೆ ಕಸ ಗುಡಿಸುತ್ತಿದ್ದ  ಮಹಿಳೆಯ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಸುಭಾಷ್ ನಗರದಲ್ಲಿ ಘಟನೆ ನಡೆದಿದೆ. ಸುಭಾಷ್ ನಗರದಲ್ಲಿ ನಸುಕಿನ ಜಾವ ಸುಮಾರು 5.30 ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ರತ್ನಮ್ಮ ಚಿನ್ನದ ಸರ ಕಳೆದುಕೊಂಡ ಮಹಿಳೆಯಾಗಿದ್ದಾರೆ. ಸುಭಾಷ್ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿ ಕಟ್ಟಡದಲ್ಲಿರುವ ತಮ್ಮ ಟೀ ಕ್ಯಾಂಟೀನ್ ಆರಂಭಿಸುವ ಸಲುವಾಗಿ ಅಂಗಡಿಯ ಮುಂದೆ ಕಸ ಗುಡಿಸುವಲ್ಲಿ ನಿರತರಾಗಿದ್ದರು. ವೇಳೆ ಟೀ ಕುಡಿಯುವ ಸೋಗಿನಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ  ಇಬ್ಬರು ವ್ಯಕ್ತಿಗಳು ಹಿಂದಿನಿಂದ  ಬಂದು ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾರೆ ಎಂದು ರತ್ನಮ್ಮ ಮಾಹಿತಿ ನೀಡಿದ್ದಾರೆ.

ಕಳೆದ ವಾರದ ಹಿಂದಷ್ಟೆ ಬೈಕ್ ನಲ್ಲಿ ಬಂದ ಅಪರಿಚಿತರು ಪಟ್ಟಣದ ಮುತ್ತುರಾಯಸ್ವಾಮಿ ಬಡಾವಣೆಯಲ್ಲಿ ಜಗದಂಬಾ ಎಂಬುವರ ಮಾಂಗಲ್ಯ ಸರ ಕಸದ ಪರಾರಿಯಾಗಿದ್ದದ್ದರು. ಒಟ್ಟು 6೦ ಗ್ರಾಂ ಚಿನ್ನದ ಸರ ಕಳುವಾಗಿದೆ. ಕೆಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments