Select Your Language

Notifications

webdunia
webdunia
webdunia
webdunia

ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ ಏನು?

ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ ಏನು?
ಬೆಂಗಳೂರು , ಸೋಮವಾರ, 7 ನವೆಂಬರ್ 2022 (12:27 IST)
ಬೆಂಗಳೂರು : ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ. ನೀವು ದೊಡ್ಡವರು, ಮಂತ್ರಿಯಾಗಿದ್ದವರು. ಶಾಸಕರಾಗಿ ಬಹಳ ವರ್ಷ ಕೆಲಸ ಮಾಡಿದವರು.
 
ಇಂತಹ ದುಃಖದ ಮನೆಗಳಿಗೆ ಹೋಗಿ ಸಾಕಷ್ಟು ಬಾರಿ ಸಾಂತ್ವನ ಹೇಳಿದ್ದೀರಿ. ಭಾವೋದ್ವೇಗ ಬೇಡ ಎಂದು ಚಂದ್ರು ಅನುಮಾನಾಸ್ಪದ ಸಾವು ಪ್ರಕರಣ ತನಿಖೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಗ ತೀರಿಕೊಂಡಾಗ ಸಹಜವಾಗಿಯೇ ಭಾವಕರಾಗಿದ್ದಾರೆ. ನಾನು ಅವರ ಮನೆಗೆ ಭೇಟಿ ಕೊಟ್ಟಿದ್ದೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ.

ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಂ ರಿಪೋರ್ಟ್ ಬರಬೇಕು. ತನಿಖೆ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ಆಗುತ್ತದೆ. ರಿಪೋರ್ಟ್ ಬಂದ ಮೇಲೆ ಎಲ್ಲಾ ತಿಳಿಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಅಪಘಾತದಲ್ಲಿ ಕುಟುಂಬದ ನಾಲ್ವರು ದುರ್ಮರಣ