Publish Date: Tue, 18 Jun 2019 (15:36 IST)
Updated Date: Tue, 18 Jun 2019 (15:37 IST)
ಮೈತ್ರಿ ಸರಕಾರ ಹಾಗೂ ಆಪರೇಷನ್ ಕಮಲದ ಸುದ್ದಿ ಹರಿದಾಡುತ್ತಿರುವಾಗಲೇ ಸಿಎಂ ಸ್ವಕ್ಷೇತ್ರದತ್ತ ಚಿತ್ತ ಹರಿಸಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಸುಮಾರು 540 ಕೋಟಿ ರೂ. ವೆಚ್ಚದ ಯೋಜನೆಗೆ ಕಣ್ವಾ ಜಲಾಶಯ ಬಳಿ ಗುದ್ದಲಿ ಪೂಜೆ ನೆರವೇರಿಸಿದರು.
ಚನ್ನಪಟ್ಟಣ, ಮಾಗಡಿ, ರಾಮನಗರ, ಕನಕಪುರ ತಾಲ್ಲೂಕಿನ ಎಲ್ಲ ಹಳ್ಳಿ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸತ್ತೇಗಾಲ ಸಮೀಪದಲ್ಲಿ ಕಾವೇರಿ ನದಿಯಿಂದ ಇಗ್ಗಲೂರು ಹೆಚ್. ಡಿ. ದೇವೇಗೌಡ ಬ್ಯಾರೆಜ್ ಗೆ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಯೋಜನೆ ಇದಾಗಿದೆ.
ಕಾವೇರಿ ನದಿಯಿಂದ 210 ಕ್ಯೂಸೆಕ್ ನೀರನ್ನು ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪಗಳ ಮೂಲಕ ನೀರನ್ನು ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ ಜಲಾಶಯಗಳಿಗೆ ತುಂಬಿಸಲಾಗುವುದು.
ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.