Select Your Language

Notifications

webdunia
webdunia
webdunia
webdunia

ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ- ಜನಾರ್ಧನರೆಡ್ಡಿ ಹೀಗ್ಯಾಕೆ ಅಂದರು?

ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ- ಜನಾರ್ಧನರೆಡ್ಡಿ ಹೀಗ್ಯಾಕೆ ಅಂದರು?
ಹುಬ್ಬಳ್ಳಿ , ಬುಧವಾರ, 31 ಜನವರಿ 2018 (08:07 IST)

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಶಾಸಕ ಸ್ಥಾನಕ್ಕೆ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಿ,ಜನಾರ್ಧನರೆಡ್ಡಿ ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ ಎಂದು ಹೇಳಿದ್ದಾರೆ.

ಸಿದ್ದಾರೂಢ ಗದ್ದುಗೆ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ, ರಾಜಕೀಯದಲ್ಲಿ ಇದೆಲ್ಲಾ ಸಾಮಾನ್ಯ. ಬಳ್ಳಾರಿಯಲ್ಲಿ ಬಿಜೆಪಿ ಬಲಿಷ್ಠವಾಗಿದೆ ಎಂದು ತಿಳಿಸಿದ್ದಾರೆ.

ಆನಂದಸಿಂಗ್ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರಕ್ಕೆ ಜನಾರ್ಧನರೆಡ್ಡಿ ಈ ರೀತಿ ಹೇಳಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಸಂಸದ ಬಿ.ಶ್ರೀರಾಮುಲು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿದ್ಧಾರೂಢ ಗದ್ದುಗೆ ದರ್ಶನವನ್ನು ಜನಾರ್ಧನರೆಡ್ಡಿ ಅವರು ಕುಟುಂಬ ಸಮೇತರಾಗಿ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮೇಕ್ ಇನ್ ಇಂಡಿಯಾ ಅಂದರೆ ಪಕೋಡ ಮಾರುವುದು- ಕುಮಾರಸ್ವಾಮಿ ವ್ಯಂಗ್ಯ