Webdunia - Bharat's app for daily news and videos

Install App

ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ- ಜನಾರ್ಧನರೆಡ್ಡಿ ಹೀಗ್ಯಾಕೆ ಅಂದರು?

Webdunia
ಬುಧವಾರ, 31 ಜನವರಿ 2018 (08:07 IST)

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಶಾಸಕ ಸ್ಥಾನಕ್ಕೆ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಿ,ಜನಾರ್ಧನರೆಡ್ಡಿ ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ ಎಂದು ಹೇಳಿದ್ದಾರೆ.

ಸಿದ್ದಾರೂಢ ಗದ್ದುಗೆ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ, ರಾಜಕೀಯದಲ್ಲಿ ಇದೆಲ್ಲಾ ಸಾಮಾನ್ಯ. ಬಳ್ಳಾರಿಯಲ್ಲಿ ಬಿಜೆಪಿ ಬಲಿಷ್ಠವಾಗಿದೆ ಎಂದು ತಿಳಿಸಿದ್ದಾರೆ.

ಆನಂದಸಿಂಗ್ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರಕ್ಕೆ ಜನಾರ್ಧನರೆಡ್ಡಿ ಈ ರೀತಿ ಹೇಳಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಸಂಸದ ಬಿ.ಶ್ರೀರಾಮುಲು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿದ್ಧಾರೂಢ ಗದ್ದುಗೆ ದರ್ಶನವನ್ನು ಜನಾರ್ಧನರೆಡ್ಡಿ ಅವರು ಕುಟುಂಬ ಸಮೇತರಾಗಿ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments