ಅತೃಪ್ತರು ಅನರ್ಹರಾಗುವುದರಿಂದ ಇಂದು ಬಿಜೆಪಿಗೆ ಆಗುವ ಲಾಭವೇನು? ನಷ್ಟವೇನು?

Webdunia
ಸೋಮವಾರ, 29 ಜುಲೈ 2019 (09:17 IST)
ಬೆಂಗಳೂರು: ವಿಶ್ವಾಸ ಮತ ಸಾಬೀತಿಗೆ ಇನ್ನು ಒಂದು ದಿನ ಬಾಕಿಯಿರುವಾಗ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರನ್ನುಅನರ್ಹಗೊಳಿಸಿದ್ದಾರೆ. ಆದರೆ ಇದರಿಂದ ಬಿಜೆಪಿಗೆ ಆಗುವ ಲಾಭವೇನು? ನಷ್ಟವೇನು?


ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವುದರಿಂದ ಬಿಜೆಪಿಗೆ ನಾಳೆ ಸುಲಭವಾಗಿ ವಿಶ್ವಾಸ ಮತ ಸಾಬೀತುಪಡಿಸಬಹುದು. ಒಂದು ವೇಳೆ ಅತೃಪ್ತರ ರಾಜೀನಾಮೆ ಇತ್ಯರ್ಥವಾಗದೇ ಇದ್ದಿದ್ದರೆ ಅವರು ಸರ್ಕಾರದ ಪರ ಮತ ಹಾಕಿದ್ದರೂ ಮುಂದಿನ ದಿನಗಳಲ್ಲಿ ಅವರಿಗೂ ಸೂಕ್ತ ಸ್ಥಾನ ಮಾನ ನೀಡಬೇಕಿತ್ತು.

ಆದರೆ ಈಗ ಅನರ್ಹಗೊಳಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಕೂಡಾ ಎತ್ತಿಹಿಡಿದರೆ ಆ 14 ಸ್ಥಾನಗಳಿಗೆ ಉಪಚುನಾವಣೆ ಮಾಡಲೇಬೇಕಾಗುತ್ತದೆ. ಆಗ ಬಿಜೆಪಿ ಇವುಗಳಲ್ಲಿ 10 ಸ್ಥಾನ ಗೆದ್ದರೂ ಬಹುಮತಕ್ಕೆ ಕೊರತೆಯಾಗದು. ಒಂದು ವೇಳೆ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬೇಕಾಗುವಷ್ಟು ಸ್ಥಾನ ಬರದೇ ಇದ್ದರೆ ಸರ್ಕಾರ ಬಿದ್ದು ಹೋಗುವ ಅಪಾಯವಿದೆ. ಅದೇ ಕಾರಣಕ್ಕೆ ಈಗ ಬಿಜೆಪಿ ನಾಯಕರು ಸ್ಪೀಕರ್ ನಿರ್ಧಾರವನ್ನು ವಿರೋಧಿಸುತ್ತಿರುವುದು. ಅದೇನೇ ಇದ್ದರೂ ಸದ್ಯಕ್ಕೆ ಬಿಜೆಪಿ ಸರ್ಕಾರ ಬಚಾವ್ ಆಗಬಹುದು. ಆದರೆ ಮುಂದೆ ದೊಡ್ಡ ಅಪಾಯವಿರುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments