Webdunia - Bharat's app for daily news and videos

Install App

ಅತೃಪ್ತರು ಅನರ್ಹರಾಗುವುದರಿಂದ ಇಂದು ಬಿಜೆಪಿಗೆ ಆಗುವ ಲಾಭವೇನು? ನಷ್ಟವೇನು?

Webdunia
ಸೋಮವಾರ, 29 ಜುಲೈ 2019 (09:17 IST)
ಬೆಂಗಳೂರು: ವಿಶ್ವಾಸ ಮತ ಸಾಬೀತಿಗೆ ಇನ್ನು ಒಂದು ದಿನ ಬಾಕಿಯಿರುವಾಗ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರನ್ನುಅನರ್ಹಗೊಳಿಸಿದ್ದಾರೆ. ಆದರೆ ಇದರಿಂದ ಬಿಜೆಪಿಗೆ ಆಗುವ ಲಾಭವೇನು? ನಷ್ಟವೇನು?


ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವುದರಿಂದ ಬಿಜೆಪಿಗೆ ನಾಳೆ ಸುಲಭವಾಗಿ ವಿಶ್ವಾಸ ಮತ ಸಾಬೀತುಪಡಿಸಬಹುದು. ಒಂದು ವೇಳೆ ಅತೃಪ್ತರ ರಾಜೀನಾಮೆ ಇತ್ಯರ್ಥವಾಗದೇ ಇದ್ದಿದ್ದರೆ ಅವರು ಸರ್ಕಾರದ ಪರ ಮತ ಹಾಕಿದ್ದರೂ ಮುಂದಿನ ದಿನಗಳಲ್ಲಿ ಅವರಿಗೂ ಸೂಕ್ತ ಸ್ಥಾನ ಮಾನ ನೀಡಬೇಕಿತ್ತು.

ಆದರೆ ಈಗ ಅನರ್ಹಗೊಳಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಕೂಡಾ ಎತ್ತಿಹಿಡಿದರೆ ಆ 14 ಸ್ಥಾನಗಳಿಗೆ ಉಪಚುನಾವಣೆ ಮಾಡಲೇಬೇಕಾಗುತ್ತದೆ. ಆಗ ಬಿಜೆಪಿ ಇವುಗಳಲ್ಲಿ 10 ಸ್ಥಾನ ಗೆದ್ದರೂ ಬಹುಮತಕ್ಕೆ ಕೊರತೆಯಾಗದು. ಒಂದು ವೇಳೆ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬೇಕಾಗುವಷ್ಟು ಸ್ಥಾನ ಬರದೇ ಇದ್ದರೆ ಸರ್ಕಾರ ಬಿದ್ದು ಹೋಗುವ ಅಪಾಯವಿದೆ. ಅದೇ ಕಾರಣಕ್ಕೆ ಈಗ ಬಿಜೆಪಿ ನಾಯಕರು ಸ್ಪೀಕರ್ ನಿರ್ಧಾರವನ್ನು ವಿರೋಧಿಸುತ್ತಿರುವುದು. ಅದೇನೇ ಇದ್ದರೂ ಸದ್ಯಕ್ಕೆ ಬಿಜೆಪಿ ಸರ್ಕಾರ ಬಚಾವ್ ಆಗಬಹುದು. ಆದರೆ ಮುಂದೆ ದೊಡ್ಡ ಅಪಾಯವಿರುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments