Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‍ಗೆ ಅಶೋಕ್ ಸಲಹೆ ಏನು?

ಕಾಂಗ್ರೆಸ್‍ಗೆ ಅಶೋಕ್ ಸಲಹೆ ಏನು?
ಬೆಂಗಳೂರು , ಗುರುವಾರ, 10 ಮಾರ್ಚ್ 2022 (12:29 IST)
ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವನ್ನು ಗಮನಿಸಿದ ಬಳಿಕ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಿ ತೀರ್ಥಯಾತ್ರೆ ಮಾಡಲಿ ಎಂದು ಸಚಿವ ಆರ್.ಅಶೋಕ್ ಕಾಂಗ್ರೆಸ್ಗೆ ಸಲಹೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ಮತ್ತೆ, ಮತ್ತೆ, ಮತ್ತೆ ಬಿಜೆಪಿ ಜಯಭೇರಿ ಬಾರಿಸುತ್ತಿದೆ.

ಇಡೀ ದೇಶದಲ್ಲಿ ಕಾಂಗ್ರೆಸ್ಗೆ ಪಂಜಾಬ್ ಒಂದೇ ಇದ್ದಿದ್ದು, ಪಂಜಾಬ್ ಕೂಡ ಇದೀಗ ಕಾಂಗ್ರೆಸ್ ಕೈ ತಪ್ಪಿದೆ. ಹಾಗಾಗಿ ಕಾಂಗ್ರೆಸ್ಗೆ ಇನ್ನುಮುಂದೆ ಪಾದಯಾತ್ರೆ ಬೇಡ ತೀರ್ಥಯಾತ್ರೆ ಮಾಡಲಿ ಎಂದು ವ್ಯಂಗ್ಯವಾಡಿದರು. 

ಜನ ಕಾಂಗ್ರೆಸ್ನ್ನು ತಿರಸ್ಕಾರ ಮಾಡಿದ್ದಾರೆ. ಮುಂದೆ ಕಾಂಗ್ರೆಸ್ನ್ನು ಜನ ಮೂಲೆ ಗುಂಪು ಮಾಡುತ್ತಾರೆ. ಇದೀಗ ಪಂಚರಾಜ್ಯಗಳ ಫಲಿತಾಂಶಗಳತ್ತ ಗಮನಹರಿಸಿದಾಗ 5 ರಾಜ್ಯಗಳ ಪೈಕಿ 4 ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ದಾಪುಗಾಲಿಡುತ್ತಿದೆ. ಉತ್ತರ ಪ್ರದೇಶದಲ್ಲಿ ಫೈಟ್ ಇದೆ. ಆದರೂ ಬಿಜೆಪಿ ಗೆಲ್ಲಲಿದೆ. ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ಜಯಗಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಸಿಟ್ ಪೋಲ್ ಫಲಿತಾಂಶವೇ ಬರುತ್ತಿದೆ: ನಾರಾಯಣಸ್ವಾಮಿ