Select Your Language

Notifications

webdunia
webdunia
webdunia
webdunia

ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಯಲ್ಲಿ ಸಂಗ್ರಹವಾದ ಹಣ ಎಷ್ಟು?

ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಯಲ್ಲಿ ಸಂಗ್ರಹವಾದ ಹಣ ಎಷ್ಟು?
ಚಿಕ್ಕಬಳ್ಳಾಪುರ , ಮಂಗಳವಾರ, 22 ಫೆಬ್ರವರಿ 2022 (08:38 IST)
ಚಿಕ್ಕಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, 56 ಲಕ್ಷ ಹಣ ಸಂಗ್ರಹವಾಗಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 56,64,318 ರೂ. ಮೊತ್ತ ಸಂಗ್ರಹವಾಗಿದೆ.

ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗಾರಾಜ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಶಾಸ್ತ್ರಿ, ದೇವಾಲಯದ ಸೂಪರ್ ಡೆಂಟ್ ರಘು ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ : ಮೌನ ಮುರಿದ ಅಮಿತ್ ಶಾ