Webdunia - Bharat's app for daily news and videos

Install App

ಸಿಎಂ ಕುಮಾಸ್ವಾಮಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಕಿದ ಸವಾಲೇನು?

Webdunia
ಭಾನುವಾರ, 4 ನವೆಂಬರ್ 2018 (14:32 IST)
ರಾಮನಗರ : ದೈವ ಇಚ್ಛೆಯಿಂದ ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾಸ್ವಾಮಿ ಹೇಳಿರುವುದಕ್ಕೆ ಇದೀಗ ರಾಮನಗರ ಜಿಲ್ಲಾ ಬಿಜೆಪಿ ಘಟಕದ  ಅಧ್ಯಕ್ಷ ಎಂ ರುದ್ರೇಶ್ ಸವಾಲೊಂದನ್ನು  ಹಾಕಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಎಂ.ರುದ್ರೇಶ್ ಅವರು,’ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿಗೆ ಹಣ ನೀಡಿ ಡೀಲ್ ಮಾಡಿಲ್ಲ ಎಂದು ತಾಯಿ ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಲಿ ಎಂದು ಸವಾಲೆಸಿದ್ದಾರೆ.


ಅಲ್ಲದೇ ಚಂದ್ರಶೇಖರ್ ಅವರು ಏಕಾಏಕಿ ಕಾಂಗ್ರೆಸ್ ಸೇರಲು ಡೀಲ್ ನಡೆದಿದೆ. ಇದೇ ವೇಳೆ ಸಚಿವ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿಯಿಂದ ಬೆಂಗಳೂರಿಗೆ ಮಧ್ಯರಾತ್ರಿಯಲ್ಲಿ ಬಂದಿದ್ದು ಏಕೆ?  ಎಂದು ಅವರು ಪ್ರಶ್ನೆ ಮಾಡಿದ್ದಾರೆ.


ಮೈತ್ರಿ ಸರ್ಕಾರ ಹಿಂಬಾಗಿನ ರಾಜಕೀಯ ಮಾಡಿ ಪಕ್ಷದ ಅಭ್ಯರ್ಥಿಯನ್ನು ಹೈಜಾಕ್ ಮಾಡಿ, ಚುನಾವಣೆಯಲ್ಲಿ ಗೊಂದಲ ಉಂಟಾಗುವಂತೆ ಮಾಡಿದೆ. ಶನಿವಾರ ನಡೆದ ಮತದಾನದ ಕೊನೆ ಕ್ಷಣದಲ್ಲಿ ಮತದಾನ ಏರಿಕೆಯಾಗಿದೆ. ಅವರ ಹಿಂಬಾಲಕರು ಬಲಾತ್ಕಾರವಾಗಿ ಮತದಾನ ಮಾಡಿಸಿದ್ದಾರೆ. ಇದು ಗೂಂಡಾಗಿರಿಯ ಚುನಾವಣೆ. ನವೆಂಬರ್ 6 ರಂದು ಲಭಿಸುವ ಫಲಿತಾಂಶ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments