ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

Krishnaveni K
ಸೋಮವಾರ, 24 ನವೆಂಬರ್ 2025 (09:13 IST)
ನವದೆಹಲಿ: ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ? ಇದೇ ಕಾರಣಕ್ಕೆ ನಾಯಕತ್ವ ಬದಲಾವಣೆಗೆ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣ ತಮ್ಮ ನಾಯಕನಿಗೆ ಸಿಎಂ ಹುದ್ದೆ ಸಿಗಬೇಕು ಎಂದು ಪ್ರಯತ್ನ ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಿಎಂ ಪಟ್ಟ ಬಿಟ್ಟುಕೊಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸಿಎಂ ಹುದ್ದೆ ತ್ಯಜಿಸಲು ಹೇಳಿದರೆ ಅವರು ಬಿಡಲೇಬೇಕಾಗುತ್ತದೆ. ಆದರೆ ಹೈಕಮಾಂಡ್ ಕೂಡಾ ತರಾತುರಿಗೆ ಬಿದ್ದು ಹಾಗೆ ಹೇಳುತ್ತಿಲ್ಲ. ಇದಕ್ಕೆ ಕಾರಣವೂ ಇದೆ.

ಸಿದ್ದರಾಮಯ್ಯ ಬಳಿ ಬಲವಂತವಾಗಿ ರಾಜೀನಾಮೆ ಕೊಡಿಸಿದರೆ ನಾಳೆ ಅವರು ಸರ್ಕಾರಕ್ಕೆ ಸಹಕಾರ ನೀಡದೇ ಇರಬಹುದು. ಅಥವಾ ಅವರ ಬೆಂಬಲಿಗರು ತಿರುಗಿ ಬೀಳಬಹುದು. ಆಗ ಸರ್ಕಾರ ಉಳಿಯುವುದು ಕಷ್ಟ. ಈ ಪರಿಸ್ಥಿತಿಯ ಲಾಭವನ್ನು ಬಿಜೆಪಿ-ಜೆಡಿಎಸ್ ಪಡೆದರೆ ರಾಜ್ಯ ಕೈತಪ್ಪಿ ಹೋಗಬಹುದು. ಸದ್ಯಕ್ಕೆ ಕಾಂಗ್ರೆಸ್ ಕೈಯಲ್ಲಿರುವ ಪ್ರಬಲ ರಾಜ್ಯವೆಂದರೆ ಕರ್ನಾಟಕ ಮಾತ್ರ. ಅಂತಹ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಸದ್ಯಕ್ಕೆ ರೆಡಿ ಇಲ್ಲ.

ಇನ್ನು ಡಿಕೆಶಿಗೂ ಸಿಎಂ ಸ್ಥಾನ ಇಲ್ಲ ಎಂದು ಖಡಾಖಂಡಿತವಾಗಿ ಹೇಳುವ ಸ್ಥಿತಿಯಲ್ಲಿ ಹೈಕಮಾಂಡ್ ಇಲ್ಲ. ಈ ಹಿಂದೆ ರಾಜಸ್ಥಾನದಲ್ಲಿ ಇದೇ ರೀತಿ ಮಾಡಿ ವಚನಭ್ರಷ್ಟ ಎಂಬ ಹಣೆಪಟ್ಟಿ ಕಾಂಗ್ರೆಸ್ ಹೈಕಮಾಂಡ್ ಹೆಗಲಿಗೇರಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಈ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೆಚ್ಚು ಶ್ರಮಪಟ್ಟಿದ್ದಾರೆ ಎಂಬ ಭಾವನೆ ಜನರಲ್ಲಿದೆ. ಈ ಹಂತದಲ್ಲಿ ಡಿಕೆಶಿಗೆ ಅನ್ಯಾಯ ಮಾಡಿದರೆ ಜನರೇ ಮುಂದೆ ಕಾಂಗ್ರೆಸ್ ಕೈ ಹಿಡಿಯದೇ ಇರಬಹುದು. ಹೀಗಾಗಿ ಹೈಕಮಾಂಡ್ ಎಚ್ಚರಿಕೆಯ ನಡೆ ಇಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments