Webdunia - Bharat's app for daily news and videos

Install App

ಉಕ್ರೇನ್ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?

Webdunia
ಮಂಗಳವಾರ, 8 ಮಾರ್ಚ್ 2022 (17:22 IST)
ಬೆಂಗಳೂರು : ಉಕ್ರೇನ್ನಿಂದ ಬಂದಿರುವ ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪ ನಾಯಕ ಯುಟಿ ಖಾದರ್ ಪ್ರಸ್ತಾಪಿಸಿದ್ದಾರೆ.

ಉಕ್ರೇನ್ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ನನ್ನು ಕಳೆದುಕೊಂಡಿದ್ದೇವೆ. ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಆಗ್ರಹಿಸಿದರು.

ರಾಜೀವ್ ಗಾಂಧಿ ವಿವಿ ಜೊತೆಗೆ ಸರ್ಕಾರ ಚರ್ಚೆ ಮಾಡಿದರೆ ಪರಿಹಾರ ಸಾಧ್ಯವಿದೆ. ನೀಟ್ನಲ್ಲೂ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಭಾವನೆ ಇದೆ.

ಇದನ್ನು ಸರ್ಕಾರ ವಿಮರ್ಶೆ ಮಾಡಬೇಕು. 1,000 ರ್ಯಾಂಕ್ಗಳಲ್ಲಿ 50 ವಿದ್ಯಾರ್ಥಿಗಳು ಕೂಡಾ ನಮ್ಮ ರಾಜ್ಯದವರಲ್ಲ. ನಮ್ಮ ವಿದ್ಯಾರ್ಥಿಗಳಲ್ಲಿ ಇಷ್ಟು ಟ್ಯಾಲೆಂಟ್ ಇದ್ದರೂ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸಿದರು. 

ಉಕ್ರೇನ್ನಿಂದ ಬಂದವರ ಶಿಕ್ಷಣದ ಭವಿಷ್ಯದ ಬಗ್ಗೆ ರಾಜೀವ್ ಗಾಂಧಿ ವಿವಿ ಉಪ ಕುಲಪತಿ ಜೊತೆಗೆ ಸಭೆ ನಡೆಸಲಾಗಿದೆ. ನಾವು ಇಲ್ಲಿ ಯಾವ ರೀತಿ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ನಲ್ಲಿ ನೀಟ್ಗೆ ಶಿಫಾರಸು ಮಾಡಬೇಕು ಎಂದು ಚರ್ಚೆ ನಡೆಸಿದ್ದೇವೆ. ನೀಟ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರವೇ ಕೊಡುವ ನಿಟ್ಟಿನಲ್ಲಿ ತೀರ್ಮಾನ ಮಾಡಿದೆ.

ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶೇ.50 ಸರ್ಕಾರಿ ಫೀಸ್ ತೆಗೆದುಕೊಳ್ಳುವಂತೆ ಪ್ರಧಾನಿ ಕೂಡಾ ಘೋಷಣೆ ಮಾಡಿದ್ದಾರೆ ಎಂದು ಸುಧಾಕರ್ ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments