Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಬಳಿಕ ಲಂಕೇಶ್ ಪತ್ರಿಕೆ ಗತಿಯೇನು? ಇಂದ್ರಜಿತ್ ಲಂಕೇಶ್ ಹೇಳಿದ್ದಿಷ್ಟು!

Webdunia
ಗುರುವಾರ, 7 ಸೆಪ್ಟಂಬರ್ 2017 (11:48 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯಾದ ಬಳಿಕ ಅವರು ಬಹುವಾಗಿ ಪ್ರೀತಿಯಿಂದ ಬೆಳೆಸಿದ ಲಂಕೇಶ್ ಪತ್ರಿಕೆಯ ಭವಿಷ್ಯವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ  ಗೌರಿ ಸಹೋದರ ಇಂದ್ರಜಿತ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಏನು ಹೇಳಿದ್ದಾರೆ ಗೊತ್ತಾ?

 
ಲಂಕೇಶ್ ಪತ್ರಿಕೆ ಬಗ್ಗೆ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿ ನಾವಿಲ್ಲ. ನಮ್ಮ ತಾಯಿ ಈ ಬಗ್ಗೆ ನಿರ್ಧರಿಸಬೇಕು. ತಾಯಿ, ಸಹೋದರಿ ಕವಿತಾ ಜತೆ ಚರ್ಚಿಸಿ ಈ ಬಗ್ಗೆ ನಿರ್ಧರಿಸಬೇಕಿದೆ. ನಮ್ಮ ತಾಯಿ  ಈಗ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿಲ್ಲ ಎಂದು ಇಂದ್ರಜಿತ್ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಮ್ಮ ಸಹೋದರಿ ಬಗ್ಗೆ ಹೇಳಿಕೊಂಡಿರುವ ಇಂದ್ರಜಿತ್, ಗೌರಿ ಜೀವನದುದ್ದಕ್ಕೂ ತನ್ನ ಹೋರಾಟವನ್ನು ತಾನೇ ಮಾಡಿಕೊಂಡಳು. ಯಾವತ್ತೂ ಅದರಲ್ಲಿ ನಮ್ಮನ್ನು ಎಳೆಯುತ್ತಿರಲಿಲ್ಲ ಎಂದು ಸಹೋದರ ಇಂದ್ರಜಿತ್ ಲಂಕೇಶ್ ಹೇಳಿಕೊಂಡಿದ್ದಾರೆ.

ಆಕೆ ಹೆಚ್ಚಾಗಿ ಏಕಾಂಗಿಯಾಗಿರಲು ಬಯಸುತ್ತಿದ್ದಳು. ಆದರೆ ತನ್ನ ವಿಚಾರಗಳಿಗಾಗಿ ಹೋರಾಡಿದಳು. ಅವಳು ಯಾವತ್ತೂ ನನಗೆ ಜೀವ ಬೆದರಿಕೆ ಇದೆ ಎನ್ನುವ ವಿಷಯವನ್ನು ನಮಗೆ ಹೇಳುತ್ತಿರಲಿಲ್ಲ. ಬಹುಶಃ ಆಕೆಗೆ ಆಕೆಯ ಹೋರಾಟಗಳಲ್ಲಿ ನಾವು ಬರುವುದು ಇಷ್ಟವಿರಲಿಲ್ಲವೇನೋ ಎಂದು ಇಂದ್ರಜಿತ್ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ ಈ ಕೊಲೆಗೆ ನ್ಯಾಯ ಸಿಗಬೇಕು. ಈ ಕೊಲೆಗಾರರಿಗೆ ಶಿಕ್ಷೆ ಕೊಡುವ ಮೂಲಕ ಬೇರೆ ಕೊಲೆಯಾಗದಂತೆ ಪಾಠವಾಗಬೇಕು ಎಂದು ಇಂದ್ರಜಿತ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ‘ನಮ್ಮನ್ನು ಕಂಡರೆ ಸಿದ್ದರಾಮಯ್ಯಗೆ ನಡುಕ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments