Webdunia - Bharat's app for daily news and videos

Install App

ಕೊರೊನಾ ವೈರಸ್ 7 ಸೋಂಕಿತರ ಆರೋಗ್ಯ ಹೇಗಿದೆ ಗೊತ್ತಾ?

Webdunia
ಸೋಮವಾರ, 30 ಮಾರ್ಚ್ 2020 (18:47 IST)
ಕೊರೊನಾ ವೈರಸ್ 7 ಸೋಂಕಿತರ ಚಿಕಿತ್ಸೆ ಮುಂದುವರಿದಿದೆ. 

ಕಾರವಾರದ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿರುವ ಜಿಲ್ಲೆಯ ಆರು ಕೊರೊನಾ ಸೋಂಕಿತರು ಹಾಗೂ ಭಟ್ಕಳ‌ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ಸೇರಿದಂತೆ ಎಲ್ಲರ  ಆರೋಗ್ಯ ಸ್ಥಿರವಾಗಿದೆ. ಆತಂಕದ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ  ಮಾಹಿತಿ‌ ನೀಡಿದ್ದಾರೆ.

ಏಳೂ ಸೋಂಕಿತರು ಭಟ್ಕಳದವರಾಗಿದ್ದು, ಆರಂಭದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ವೈದ್ಯಕೀಯ ಸೌಕರ್ಯ ಕಲ್ಪಿಸುವುದಲ್ಲದೇ ಆಸ್ಪತ್ರೆಯಲ್ಲಿ ಸೋಂಕಿತರ ಕುಟುಂಬದವರು , ಸಂಬಂಧಿಗಳಿಂದ ಉಂಟಾಗುವ ದಟ್ಟಣೆ ತಡೆಗಟ್ಟಲು ಆರು ಜನರನ್ನು ಪತಂಜಲಿಗೆ ಸೇರಿಸಲಾಗಿದೆ.‌

ಸೋಂಕಿತರ ಆರೋಗ್ಯ‌ದಲ್ಲಿ ಯಾವುದೇ ಏರುಪೇರು ಕಂಡುಬರದೆ ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ಕೊರೊನಾದಿಂದ ಆತಂಕಗೊಂಡಿರುವ ಜಿಲ್ಲೆಯ ಜನತೆಗೆ ಕೊಂಚ ನೆಮ್ಮದಿ ತಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments