Webdunia - Bharat's app for daily news and videos

Install App

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?

Webdunia
ಶನಿವಾರ, 10 ಫೆಬ್ರವರಿ 2018 (07:25 IST)
ಬೆಂಗಳೂರು : ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯನ್ನು ಸಿಎಂ ಸಿದ್ದರಾಮಯ್ಯ ಅವರ ಭರವಸೆಯ ಮೇರೆಗೆ ಹಿಂಪಡೆಯಲಾಗಿದೆ.


ವಿವಿಧ ಸಂಘಟನೆಗಳ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ನಂತರ ‘ವೇತನ ಹೆಚ್ಚಳ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು. ಮುಷ್ಕರ ವಾಪಸ್ ಪಡೆದುಕೊಳ್ಳಿ ಎಂದು ಬಿಸಿಯೂಟ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದ್ದ ಕಾರಣ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.


ವಿವಿಧ ಸಂಘಟನೆಗಳ ಮುಖಂಡರ ಜೊತೆಗಿನ ಮಾತುಕತೆಯಲ್ಲಿ ಕಾರ್ಯಕರ್ತರ ವೇತನವನ್ನು 2,200ರಿಂದ 2,600ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಆದರೆ 3 ಸಾವಿರಕ್ಕೆ ಏರಿಸುವಂತೆ ಮುಖಂಡರು ಮನವಿ ಮಾಡಿದರು. ಈ ಸಭೆಯಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್, ಶಾಲಿನಿ ರಜನೀಶ್‌, ಸಂಘಟನೆಗಳ ಮುಖಂಡರಾದ ರಾಮಚಂದ್ರಪ್ಪ, ವರಲಕ್ಷ್ಮಿ, ಯಮುನಾ ಗಾಂವಕರ್, ಗೋಪಾಲ್ ಹಾಗೂ ಅಧಿಕಾರಿಗಳು ಹಾಜರಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments