Webdunia - Bharat's app for daily news and videos

Install App

ಅಭ್ಯರ್ಥಿಗಳಿಗೆ ತೊಂದರೆ ಕೊಟ್ಟು ಆತುರದಿಂದ ಕೆಪಿಎಸ್‌ಸಿ ಪರೀಕ್ಷೆ ಮಾಡುವ ಉದ್ದೇಶವೇನು: ಕುಮಾರಸ್ವಾಮಿ ಪ್ರಶ್ನೆ

Sampriya
ಗುರುವಾರ, 15 ಆಗಸ್ಟ್ 2024 (15:30 IST)
ಬೆಂಗಳೂರು: ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್‌ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಎಚ್‌ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಲೋಕಸೇವಾ ಆಯೋಗ ಈ ತಿಂಗಳ 27ರಂದು 2023-24ರ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್‌ಸಿಯು ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕೇಂದ್ರ

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್‌ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್‌ ಕರ್ನಾಟಕ ಸರಕಾರ ಹಾಗೂ #ಕೆಪಿಎಸ್‌ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments