Select Your Language

Notifications

webdunia
webdunia
webdunia
webdunia

ಹಲಾಲ್ ಕಟ್ ನಟ ಚೇತನ್ ಪ್ರತಿಕ್ರಿಯೆಯೇ ಏನು?

ಹಲಾಲ್ ಕಟ್ ನಟ ಚೇತನ್ ಪ್ರತಿಕ್ರಿಯೆಯೇ ಏನು?
ಬೆಂಗಳೂರು , ಭಾನುವಾರ, 3 ಏಪ್ರಿಲ್ 2022 (09:05 IST)
ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿದ್ಯಮಾನಗಳಿಗೂ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸುತ್ತಿದ್ದಾರೆ.

ಈ ಕಾರಣಕ್ಕಾಗಿ ಅವರು ಒಂದೊಂದು ಸಲ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಈ ಸಲ ಅವರು ‘ಹಲಾಲ್’ ಕಟ್ ಮತ್ತು ‘ಜಟ್ಕಾ’ ಕಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,

ಕೊಲ್ಲುವ ಮಾದರಿಗಳ ಬಗ್ಗೆ ಹೋರಾಡುವ ಬದಲು, ಜೀವ ರಕ್ಷಣೆಯ ಕೆಲಸ ಮಾಡಬೇಕು ಅಲ್ಲವಾ? ಎಂದು ಪರೋಕ್ಷವಾಗಿ ಹಿಂದೂ ಸಂಘಟನೆಗಳ ಕುರಿತು ಮಾತನಾಡಿದ್ದಾರೆ.  

ಹಲಾಲ್ ಕಟ್ ನಿಷೇಧಿಸಬೇಕು ಎಂಬ ಹೋರಾಟ ಕರ್ನಾಟಕದಲ್ಲಿ ತೀವ್ರಗೊಂಡಿದೆ. ಹಲಾಲ್ ಆಹಾರಗಳನ್ನು ಹಿಂದೂಗಳು ಕೊಳ್ಳದಿರುವಂತೆ ಹಿಂದೂಪರ ಸಂಘಟನೆಗಳು ಬೀದಿಗೆ ಇಳಿದಿವೆ.

ನಟ ಚೇತನ್ ಮೊನ್ನೆಯಷ್ಟೇ ಹಿಜಬ್ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ನ್ಯಾಯಾಧೀಶರ ವಿರುದ್ಧ ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದರು ಎನ್ನುವ ಕಾರಣಕ್ಕಾಗಿ ಜೈಲಿಗೂ ಹೋಗಿ ಬಂದರು.

ಅಲ್ಲದೇ ಇವರನ್ನು ದೇಶ ಬಿಡಿಸುವಂತಹ ಕೆಲಸಗಳು ನಡೆಯುತ್ತವೆ ಎಂದಾಗ, ಅದೆಲ್ಲವೂ ಸುಳ್ಳು, ನನ್ನ ಹೋರಾಟ ನಿರಂತರ ಎನ್ನುವ ಮೂಲಕ ತಮ್ಮ ಮಾತಿಗೆ ಬದ್ಧರಾಗಿಯೇ ಉಳಿಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟ್ಟರ್ : ಹೊಸ ಎಡಿಟ್ ಫೀಚರ್ ಬರಲಿದೆ