Webdunia - Bharat's app for daily news and videos

Install App

ಮಹೇಶ್ ಗೌಡ-ಉಪೇಂದ್ರ ನಡುವೆ ಭಿನ್ನಾಭಿಪ್ರಾಯಕ್ಕೆ ನಿಜ ಕಾರಣವೇನು? ಪ್ರಿಯಾಂಕಾ ಉಪೇಂದ್ರ ಹೇಳಿದ ಕಾರಣವಿದು!

Webdunia
ಬುಧವಾರ, 7 ಮಾರ್ಚ್ 2018 (09:01 IST)
ಬೆಂಗಳೂರು: ಕೆಪಿಜೆಪಿ ಪಕ್ಷದಿಂದ ನಟ ಉಪೇಂದ್ರ ಹೊರ ಬಿದ್ದಾಗಿದೆ. ಇದಕ್ಕೆ ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ಜತೆಗಿನ ಭಿನ್ನಾಭಿಪ್ರಾಯವೇ ಕಾರಣ ಎನ್ನುವುದು ಗೊತ್ತಾಗಿದೆ.

ಈ ಬಗ್ಗೆ ಉಪೇಂದ್ರ ಪತ್ನಿ ಪ್ರಿಯಾಂಕಾ ಉಪೇಂದ್ರ ಮಾಧ್ಯಮದ ಬಳಿ ಹೇಳಿಕೊಂಡಿದ್ದಾರೆ. ಮಹೇಶ್ ಗೌಡ ನಮ್ಮ ಜತೆ ಚೆನ್ನಾಗಿಯೇ ಇದ್ದರು. ನಮ್ಮ ಮನೆಗೆ ಬಂದು ಊಟ ಮಾಡಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ಅವರು ಉಪ್ಪಿ ಮೇಲೆ ಹೀಗೆಲ್ಲಾ ಆರೋಪ ಮಾಡುತ್ತಿರುವುದು ಏಕೆ ಗೊತ್ತಾಗುತ್ತಿಲ್ಲ ಎಂದು ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ.

ಅಷ್ಟೇ ಅಲ್ಲ, ಉಪೇಂದ್ರ ಜತೆ ಭಿನ್ನಾಭಿಪ್ರಾಯಗಳಿದ್ದರೆ ಮೊದಲೇ ಹೇಳಬೇಕಿತ್ತು. ಪಕ್ಷಕ್ಕೆ ಹೆಸರು ಬರುವವರೆಗೂ ಉಪೇಂದ್ರ ಬೇಕಿತ್ತು. ಈಗ ತಾನು ಸಂಸ್ಥಾಪಕ ಎಂಬ ಅಹಂ ಅವರಿಗೆ ಬಂದಿದೆ. ಹೆಸರು ಬಂದ ತಕ್ಷಣ ಹೀಗೆಲ್ಲಾ ವರ್ತಿಸುವುದಕ್ಕೆ, ಆರೋಪ ಮಾಡುವುದಕ್ಕೆ ಕಾರಣವೇನು? ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ.

ಇದೇ ವೇಳೆ ಪತಿ ಉಪೇಂದ್ರರ ಹೊಸ ಪಕ್ಷ ಸ್ಥಾಪನೆ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಉಪೇಂದ್ರ ನಿರ್ಧಾರದಿಂದ ಒಳ್ಳೆಯದೇ ಆಗಿದೆ. ಅವರು ತಮ್ಮ ಕನಸನ್ನು ಈ ಮೂಲಕ ಸಾಧಿಸಲಿದ್ದಾರೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments