Select Your Language

Notifications

webdunia
webdunia
webdunia
webdunia

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದರ ಹಿಂದಿನ ಕಾರಣವೇನು ಗೊತ್ತಾ?

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದರ ಹಿಂದಿನ ಕಾರಣವೇನು ಗೊತ್ತಾ?
ಬೆಂಗಳೂರು , ಬುಧವಾರ, 27 ಫೆಬ್ರವರಿ 2019 (06:20 IST)
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ಮುಂಬೈ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹುಸಿ ಬಾಂಬ್ ಕರೆ ಮಾಡಿರುವುದಕ್ಕೆ ಕಾರಣವೆನೆಂಬುದನ್ನು ಬಾಯ್ಬಿಟ್ಟಿದ್ದಾರೆ.


ಹೌದು. ಇತ್ತೀಚೆಗಷ್ಟೇ ಒಬ್ಬ ವ್ಯಕ್ತಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ದುಬೈಗೆ ತೆರಳುವ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಆದರೆ ಯಾವುದೇ ಬಾಂಬ್ ಕಂಡು ಬಂದಿರಲಿಲ್ಲ. ನಂತರ ಅದು ಹುಸಿ ಬಾಂಬ್ ಕರೆ ಎಂದು ತಿಳಿದು ಈ ಬಗ್ಗೆ ತನಿಖೆ ನಡೆಸಿದ್ದರು. ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕ ಪ್ರತೀಕ್ ಠಾಕೂರ್ ಎಂಬುವವರ ನಂಬರ್ ನಿಂದಲೇ ಕರೆ ಬಂದಿರುವುದು ತಿಳಿದ ಹಿನ್ನಲೆಯಲ್ಲಿ ಪ್ರತೀಕ್ ಠಾಕೂರ್, ಅವರ ಪತ್ನಿ ಸುರಂಗಿ ಠಾಕೂರ್, ಪುತ್ರ ಅಮ್ನಾ ಠಾಕೂರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಬಗ್ಗೆ ಅವರನ್ನು ವಿಚಾರಣೆ ಮಾಡಿದಾಗ ವಿವಾಹ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಇವರು ವಾಪಸ್ ಮುಂಬೈಗೆ ಹೊರಟಿದ್ದಾಗ ಅವರು ತೆರಳಬೇಕಿದ್ದ ವಿಮಾನ ಮಿಸ್ ಆಗಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂಬುದನ್ನು ಬಾಯ್ಬಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ವಾಯಸೇನೆಯ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನವಜೋತ್ ಸಿಂಗ್ ಸಿಧು ಹೇಳಿದ್ದೇನು ಗೊತ್ತಾ?