Webdunia - Bharat's app for daily news and videos

Install App

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದರ ಹಿಂದಿನ ಕಾರಣವೇನು ಗೊತ್ತಾ?

Webdunia
ಬುಧವಾರ, 27 ಫೆಬ್ರವರಿ 2019 (06:20 IST)
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ಮುಂಬೈ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹುಸಿ ಬಾಂಬ್ ಕರೆ ಮಾಡಿರುವುದಕ್ಕೆ ಕಾರಣವೆನೆಂಬುದನ್ನು ಬಾಯ್ಬಿಟ್ಟಿದ್ದಾರೆ.


ಹೌದು. ಇತ್ತೀಚೆಗಷ್ಟೇ ಒಬ್ಬ ವ್ಯಕ್ತಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ದುಬೈಗೆ ತೆರಳುವ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಆದರೆ ಯಾವುದೇ ಬಾಂಬ್ ಕಂಡು ಬಂದಿರಲಿಲ್ಲ. ನಂತರ ಅದು ಹುಸಿ ಬಾಂಬ್ ಕರೆ ಎಂದು ತಿಳಿದು ಈ ಬಗ್ಗೆ ತನಿಖೆ ನಡೆಸಿದ್ದರು. ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕ ಪ್ರತೀಕ್ ಠಾಕೂರ್ ಎಂಬುವವರ ನಂಬರ್ ನಿಂದಲೇ ಕರೆ ಬಂದಿರುವುದು ತಿಳಿದ ಹಿನ್ನಲೆಯಲ್ಲಿ ಪ್ರತೀಕ್ ಠಾಕೂರ್, ಅವರ ಪತ್ನಿ ಸುರಂಗಿ ಠಾಕೂರ್, ಪುತ್ರ ಅಮ್ನಾ ಠಾಕೂರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಬಗ್ಗೆ ಅವರನ್ನು ವಿಚಾರಣೆ ಮಾಡಿದಾಗ ವಿವಾಹ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಇವರು ವಾಪಸ್ ಮುಂಬೈಗೆ ಹೊರಟಿದ್ದಾಗ ಅವರು ತೆರಳಬೇಕಿದ್ದ ವಿಮಾನ ಮಿಸ್ ಆಗಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂಬುದನ್ನು ಬಾಯ್ಬಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮುಂದಿನ ಸುದ್ದಿ
Show comments