Webdunia - Bharat's app for daily news and videos

Install App

ಆತ್ಮಹತ್ಯೆ ಹೇಡಿತನದ ಕೃತ್ಯ ಎಂದಿದ್ದ ಸಿಪಿಐ ತಾವದನ್ನೇ ಮಾಡಿದ್ದೇಕೆ?

Webdunia
ಗುರುವಾರ, 20 ಅಕ್ಟೋಬರ್ 2016 (11:03 IST)
ತಮ್ಮ ಕಚೇರಿಯಲ್ಲೇ ತಲೆಗೆ ಗುಂಡಿಟ್ಟುಕೊಂಡು ಸಾವಿಗೆ ಶರಣಾದ ಮಾಲೂರು ಸರ್ಕಲ್ ಇನ್ಸಪೆಕ್ಟರ್ ರಾಘವೇಂದ್ರನ್ ಪ್ರಕರಣದ ಹಿನ್ನೆಲೆ ಕಗ್ಗಂಟಾಗುತ್ತಲೇ ಸಾಗಿದೆ. ಘಟನೆ ನಡೆದು 48 ಗಂಟೆಗಳಾದರೂ ಅವರು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. 
ವಿಚಿತ್ರವೆಂದರೆ ಕಳೆದ ತಿಂಗಳು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನ್ನಾಡುತ್ತಿದ್ದ ರಾಘವೇಂದ್ರನ್ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು. ಇದು ಹೇಡಿಗಳೆಸಗುವ ಕೃತ್ಯ. ಯಾರು ಕೂಡ  ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಕಿವಿ ಮಾತು ಹೇಳಿದ್ದರು ಮತ್ತು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ನೆರೆದವರಿಂದ ಪ್ರಮಾಣ ವಚನ ಮಾಡಿಸಿದ್ದರು ಎಂದು ತಿಳಿದು ಬಂದಿದೆ. 
 
ಪ್ರಕರಣದ ತನಿಖಾ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೋಲಾರ್ ಡಿವೈಎಸ್‌ಪಿ ಅಬ್ಲುಲ್ ಸತ್ತಾರ್ ಸತ್ಯವನ್ನು ಹೊರಕ್ಕೆ ತೆಗೆಯಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. 
 
ಮೃತರ ಪರಿವಾರದವರು ಇನ್ನು ಕೂಡ ಆಘಾತದಿಂದ ಹೊರಬರದ ಕಾರಣ ಅವರನ್ನು ವಿಚಾರಿಸಲಾಗಿಲ್ಲ. ಬಡತನದಿಂದ ಮೇಲೆ ಬಂದಿದ್ದ ರಾಘವೇಂದ್ರನ್ ತಮ್ಮ ಅಕ್ಕ- ಭಾವನ ಸಹಾಯದಿಂದ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದರು. ತಮ್ಮ ಅಕ್ಕನ ಮಗಳನ್ನೇ ಮದುವೆಯಾಗಿದ್ದ ಅವರು ಪತ್ನಿಯೊಂದಿಗೆ ಅನೋನ್ಯವಾಗಿದ್ದರು ಎಂದು ತಿಳಿದು ಬಂದಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments