Webdunia - Bharat's app for daily news and videos

Install App

ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಅಂಥದ್ದೇನಾಗಿದೆ?

Webdunia
ಶನಿವಾರ, 7 ಸೆಪ್ಟಂಬರ್ 2019 (16:31 IST)
ಪವಿತ್ರವಾಗಿರೋ ತ್ರಿವೇಣಿ ಸಂಗಮ ಕ್ಷೇತ್ರ ಆ ಕೆಲಸದಿಂದ ವಂಚಿತವಾಗಿದೆ ಎಂಬ ದೂರು ಕೇಳಿಬರುತ್ತಿದೆ.
ಅಭಿವೃದ್ಧಿ ಕೆಲಸ ಕಾರ್ಯಗಳಿಂದ ಅಂಬಿಗರಹಳ್ಳಿ, ಪುರ ಮತ್ತು ಸಂಗಾಪುರ ಗ್ರಾಮಗಳ ಸಮೀಪದಲ್ಲಿರುವ  ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರ ವಂಚಿತವಾಗಿದೆ.

ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳು ಒಂದೆಡೆ ಸೇರುವ ಪವಿತ್ರ ಸಂಗಮ ಕ್ಷೇತ್ರವು ಕೃಷ್ಣರಾಜಪೇಟೆ ತಾಲ್ಲೂಕು ಕೇಂದ್ರದಿಂದ ಕೇವಲ 25 ಕಿ.ಮೀ ದೂರದಲ್ಲಿದೆ. ಈ ಕ್ಷೇತ್ರ ಅಭಿವೃದ್ಧಿ ಕೆಲಸ ಕಾರ್ಯಗಳಿಂದ ವಂಚಿತವಾಗಿದ್ದು, ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರವು ಪ್ರಸಿದ್ಧಿಗೆ ಬರದೇ ಜನಮಾನಸದಿಂದ ದೂರವಾಗುತ್ತಿದೆ.

ತ್ರಿವೇಣಿ ಸಂಗಮ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಮುಂದಾಗಬೇಕು.  ನಾಡಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಅನುದಾನ ಬಿಡುಗಡೆ ಮಾಡಿ 
ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ.ಅಂ.ಚಿ.ಸಣ್ಣಸ್ವಾಮಿಗೌಡ ಒತ್ತಾಯಿಸಿದ್ದಾರೆ.

ಮಲೈಮಹದೇಶ್ವರರು ಬಾಲಕರಾಗಿದ್ದಾಗ ಪವಾಡ ಮಾಡಿರುವ ಕ್ಷೇತ್ರವಾದ ತ್ರಿವೇಣಿ ಸಂಗಮವು ಕಾವೇರಿ ನದಿಯನ್ನು ದಾಟಲು ಬಾಲಕ ಮಹದೇಶ್ವರರು ಹರಿಗೋಲಿನ ವೆಚ್ಚವಾಗಿ ಹಣ ಕೇಳಿದಾಗ ಅಂಬಿಗರಿಗೆ ಶಾಪ ನೀಡಿ ತಾವು ಧರಿಸಿರುವ ವಸ್ತ್ರವನ್ನೇ ನದಿಯ ನೀರಿನ ಮೇಲೆ ಹಾಸಿ ತೆಪ್ಪವನ್ನಾಗಿ ಮಾಡಿಕೊಂಡು ನದಿ ದಾಟಿ ಕಪ್ಪಡಿ ಕ್ಷೇತ್ರಕ್ಕೆ ಹೋದ ಇತಿಹಾಸವಿದೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments