ವಾಲ್ಮೀಕಿ ನಿಗಮ ಮಂಡಳಿ ಎಂದರೇನು, ಇದರ ಸ್ಥಾಪನೆಯ ಉದ್ದೇಶವೇನು ಇಲ್ಲಿದೆ ಡೀಟೈಲ್ಸ್

Krishnaveni K
ಶುಕ್ರವಾರ, 12 ಜುಲೈ 2024 (12:10 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಭಾರೀ ಸದ್ದು ಮಾಡುತ್ತಿರುವುದು ವಾಲ್ಮೀಕಿ ನಿಗಮ ಮಂಡಳಿ ಹಗರಣ ವಿಚಾರ. ಅಷ್ಟಕ್ಕೂ ವಾಲ್ಮೀಕಿ ನಿಗಮ ಮಂಡಳಿ ಎಂದರೇನು, ಇದು ಯಾವಾಗ ಸ್ಥಾಪನೆಯಾಯಿತು ಮತ್ತು ಅದರ ಉದ್ದೇಶವೇನು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ವಾಲ್ಮೀಕಿ ನಿಗಮ ಮಂಡಳಿ ಸ್ಥಾಪನೆಯಾಗಿದ್ದು 2006 ರಲ್ಲಿ. ಇದರ ಮುಖ್ಯ ಉದ್ದೇಶವೆಂದರೆ ವಾಲ್ಮೀಕಿ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆ. ಆರ್ಥಿಕವಾಗಿ ಹಿಂದುಳಿದ ವಾಲ್ಮೀಕಿ ಸಮುದಾಯದ ಜನರ ಅಭಿವೃದ್ಧಿಗಾಗಿ ಈ ನಿಗಮ ಮಂಡಳಿಯನ್ನು ಸ್ಥಾಪಿಸಲಾಗಿತ್ತು.

ಆದರೆ ಈಗ ಅದೇ ನಿಗಮ ಮಂಡಳಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲ್ಮೀಕಿ ಸಮುದಾಯದವರ ಆರ್ಥಿಕ ಸಬಲೀಕರಣಕ್ಕೆ ಬಳಕೆಯಾಗಬೇಕಿದ್ದ ಹಣ ಭ್ರಷ್ಟರ ಹೊಟ್ಟೆ ತುಂಬಿದೆ. ವಾಲ್ಮೀಕಿ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯವಾಗಿದೆ. ವಾಲ್ಮೀಕಿ ಸಮುದಾಯದವರಿಗೆ ಉದ್ಯೋಗಾವಕಾಶ, ಸಾಮಾಜಿಕ ಭದ್ರತೆ, ಆರ್ಥಿಕ ಭದ್ರತೆ, ಸ್ವಯಂ ಉದ್ಯೋಗ ತರಬೇತಿ ಇತ್ಯಾದಿ ಅಭಿವೃದ್ಧಿ ಕಾರ್ಯಕ್ಕೆಂದು ಈ ನಿಗಮವನ್ನು ಸ್ಥಾಪಿಸಲಾಗಿದೆ. ಈ ಇಲಾಖೆ ಬುಡಕಟ್ಟು ಕಲ್ಯಾಣ ಸಚಿವಾಲಯದ ಅಧೀನದಲ್ಲಿ ಬರುತ್ತದೆ. ಈ ಖಾತೆ ನಾಗೇಂದ್ರ ಬಳಿಯಿತ್ತು. ಆಗಲೇ ಅವರು ಅಕ್ರಮ ಮಾಡಿದ್ದರು ಎಂಬುದು ಆರೋಪವಾಗಿದೆ.

ವಾಲ್ಮೀಕಿ ಸಮುದಾಯಕ್ಕೆ ಎಂದು ನಿಗಮಕ್ಕೆ ಸರ್ಕಾರದಿಂದ ಮಂಜೂರಾಗಿದ್ದ ಹಣ ಈಗ ಭ್ರಷ್ಟರ ಪಾಲಾಗಿದೆ. ಇದೆಲ್ಲದಕ್ಕೂ ಸಚಿವರಾಗಿದ್ದ ನಾಗೇಂದ್ರ ಕುಮ್ಮಕ್ಕು ಇತ್ತು ಎಂದು ಆರೋಪಿಸಲಾಗಿದೆ. ಇದೀಗ ಇಡಿ ಮತ್ತು ಎಸ್ಐಟಿ ಎರಡೂ ರಂಗಕ್ಕಿಳಿದಿದ್ದು ಪ್ರಕರಣದ ಕೂಲಂಕುಷ ತನಿಖೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ನಿತೀಶ್‌ ಕುಮಾರ್‌ ಪಕ್ಷಕ್ಕೆ ಬಿಗ್‌ಶಾಕ್‌

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ಮುಂದಿನ ಸುದ್ದಿ
Show comments