ಯುವಕರ ಗಾಂಜಾ ನಶೆ ಏನೆಲ್ಲ ಆಯ್ತು!?

Webdunia
ಸೋಮವಾರ, 6 ಡಿಸೆಂಬರ್ 2021 (09:07 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡ ರಾತ್ರಿ ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕರು ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ.
ಸದ್ಯ ಗಾಂಜಾ ಮತ್ತಿನಲ್ಲಿ ಹಾವಳಿ ಕೊಡುತ್ತಿದ್ದ ಪುಂಡರನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ ಒಂದೆರೆಡಲ್ಲ. ಸದಾ ಗಾಂಜಾ ಮತ್ತಿನಲ್ಲೇ ಇರುತ್ತಿದ್ದ ಅಪ್ರಾಪ್ತ ಹುಡುಗರು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲೆಸೆಯುವುದು. ಬೈಕ್‌ಗಳನ್ನು ಅಡ್ಡಗಟ್ಟಿ ರಾಬರಿ ಮಾಡುವುದು. ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಪುಂಡಾಟ ಮಾಡುವುದು. ಹಗಲಿನ ವೇಳೆ ವೃದ್ಧರ ಮೇಲೆ ಲಾಂಗ್ ಬೀಸುವುದು. ಜನರ ಜೇಬಿನಲ್ಲಿ ಇದ್ದ ಹಣ ಎಗರಿಸಿ ಪರಾರಿಯಾಗುವುದು. ಬೇಕರಿಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡುವುದು. ಹೀಗೆ ಅನೇಕ ಅಪರಾದಗಳನ್ನು ಮಾಡುತ್ತಾ ಬಂದಿದ್ದಾರೆ.
ಸದ್ಯ ಗಾಂಜಾ ಮತ್ತಿನಲ್ಲಿ ಗೂಂಡಾಗಿರಿ ಮಾಡುತ್ತಿದ್ದ ಮೂವರು ಅಪ್ರಾಪ್ತರ ಗ್ಯಾಂಗ್ನನ್ನು ಪುಲಕೇಶಿನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ಆರೋಪಿಗಳನ್ನು ಬಾಲಮಂದಿರಕ್ಕೆ ಕಳಿಸಿದ್ದಾರೆ.
ಬೈಕ್ಗಳ ಕರ್ಕಶ ಶಬ್ದಕ್ಕೆ ನಾಯಿ ಬೊಗಳಿದ ಹಿನ್ನೆಲೆ, ಅದೇ ರಸ್ತೆಯ ಕನ್ಟ್ರಕ್ಷನ್ ಬಿಲ್ಡಿಂಗ್ನಿಂದ ರಾಡ್ ತಂದ ಸವರಾರು, ರಾಡ್‌ನಿಂದ ಹೊಡೆದು ನಾಯಿಯನ್ನು ಸಾಯಿಸಿದ್ದಾರೆ. ಬೈಕ್ನಲ್ಲಿ ಹೋಗುತ್ತಿದ್ದಂತೆ ನಾಯಿ ಮೇಲೆ ರಾಡ್ ಬೀಸಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳದಲ್ಲೇ ಶ್ವಾನ ಸಾವನ್ನಪ್ಪಿದೆ.
ಇತ್ತಿಚಿಗೆ ಗಾಂಜಾ ಅಡ್ಡೆಯಾಗಿ ಈ ಸ್ಥಳ ಬದಲಾಗಿದೆ. ಆರೋಪಕ್ಕೆ ಪುಷ್ಟಿ ನೀಡುವಂತೆ ಒಂದರ ನಂತರ ಮತ್ತೊಂದು ಘಟನೆ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ನಾಯಿಯ ಮೇಲೆ ನಡೆದ ಭೀಕರ ಹಲ್ಲೆ ವಿಡಿಯೋ ಸಹ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments