ಜೈಲಿನಿಂದ ರಿಲೀಸ್ ಆದ ತಕ್ಷಣ ಮಾಜಿ ಸಚಿವ ನಾಗೇಂದ್ರ ಮಾಡಿದ್ದು ಇದೇ ಕೆಲಸ

Krishnaveni K
ಗುರುವಾರ, 17 ಅಕ್ಟೋಬರ್ 2024 (10:00 IST)
ಬೆಂಗಳೂರು: ವಾಲ್ಮೀಕಿ ಹಗರಣ ವಿಚಾರವಾಗಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರ ನಿನ್ನೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ತಕ್ಷಣ ಅವರು ಮಾಡಿದ ಕೆಲಸವೇನು ಗೊತ್ತಾ?

ನಿನ್ನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ನಾಗೇಂದ್ರ ಇದೆಲ್ಲಾ ಬಿಜೆಪಿಯ ಪಿತೂರಿ. ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನನಗೆ ಒತ್ತಡ ಹಾಕಿದ್ದರು ಎಂದೆಲ್ಲಾ ಹಲವು ಆರೋಪಗಳನ್ನು ಮಾಡಿದ್ದರು.

ಜೈಲಿನಿಂದ ಬಿಡುಗಡೆಯಾದ ಮೇಲೆ ಅವರಿಗೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಯಾಗಿದ್ದರು. ಮಾಧ್ಯಮಗಳ ಮುಂದೆ ನಾಗೇಂದ್ರಗೆ ಜಮೀರ್ ಅಹ್ಮದ್ ಬೆಂಬಲ ಘೋಷಿಸುತ್ತಿದ್ದಂತೇ ಅವರ ಅಭಿಮಾನಿಗಳು ಜೈಕಾರ ಕೂಗಿದ್ದರು.

ಈ ನಡುವೆ ಜೈಲಿನಿಂದ ರಿಲೀಸ್ ಆದ ತಕ್ಷಣ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗೊಂಡ ಮಾಜಿ ಸಚಿವ ನಾಗೇಂದ್ರ ಅವರು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments