Webdunia - Bharat's app for daily news and videos

Install App

ಜೈಲಿನಿಂದ ರಿಲೀಸ್ ಆದ ತಕ್ಷಣ ಮಾಜಿ ಸಚಿವ ನಾಗೇಂದ್ರ ಮಾಡಿದ್ದು ಇದೇ ಕೆಲಸ

Krishnaveni K
ಗುರುವಾರ, 17 ಅಕ್ಟೋಬರ್ 2024 (10:00 IST)
ಬೆಂಗಳೂರು: ವಾಲ್ಮೀಕಿ ಹಗರಣ ವಿಚಾರವಾಗಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರ ನಿನ್ನೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ತಕ್ಷಣ ಅವರು ಮಾಡಿದ ಕೆಲಸವೇನು ಗೊತ್ತಾ?

ನಿನ್ನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ನಾಗೇಂದ್ರ ಇದೆಲ್ಲಾ ಬಿಜೆಪಿಯ ಪಿತೂರಿ. ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನನಗೆ ಒತ್ತಡ ಹಾಕಿದ್ದರು ಎಂದೆಲ್ಲಾ ಹಲವು ಆರೋಪಗಳನ್ನು ಮಾಡಿದ್ದರು.

ಜೈಲಿನಿಂದ ಬಿಡುಗಡೆಯಾದ ಮೇಲೆ ಅವರಿಗೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಯಾಗಿದ್ದರು. ಮಾಧ್ಯಮಗಳ ಮುಂದೆ ನಾಗೇಂದ್ರಗೆ ಜಮೀರ್ ಅಹ್ಮದ್ ಬೆಂಬಲ ಘೋಷಿಸುತ್ತಿದ್ದಂತೇ ಅವರ ಅಭಿಮಾನಿಗಳು ಜೈಕಾರ ಕೂಗಿದ್ದರು.

ಈ ನಡುವೆ ಜೈಲಿನಿಂದ ರಿಲೀಸ್ ಆದ ತಕ್ಷಣ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗೊಂಡ ಮಾಜಿ ಸಚಿವ ನಾಗೇಂದ್ರ ಅವರು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments