Webdunia - Bharat's app for daily news and videos

Install App

ಬಾಳೆ ಬುಡದಲ್ಲಿ ಆದ ಪವಾಡವಾದ್ರೂ ಏನು ಗೊತ್ತಾ?

Webdunia
ಬುಧವಾರ, 11 ಜುಲೈ 2018 (16:06 IST)
ಇದು ಪವಾಡ ಕ್ಷೇತ್ರ ಅನ್ನೋದಿಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಹೌದು ಅಂಥ ಪವಾಡ ಕ್ಷೇತ್ರ ಯಾವುದು ಆ ಪವಾಡವಾದ್ರು ಏನು ಅಂದ್ರೆ ಮುಂದೆ ಹೇಳ್ತೀವಿ ನೋಡಿ. ನಮ್ಮ ಹಿಂದಿನಿಂದಲೂ ಒಂದು ಗಾದೆಯಿದೆ  ಬಾಳೆಗೆ ಒಂದೇ ಗೊನೆ. ರಾಗಿಗೆ ಒಂದೇ ತೆನೆ   ಅಂಥ   ಅದು ಇಲ್ಲಿಯವರೆಗೂ ನಿಜ ಕೂಡ ಆಗಿದೆ. ಆದರೇ ಈ ಪವಾಡ ಕ್ಷೇತ್ರದಲ್ಲಿ ಬಾಳೆಯನ್ನು ಕತ್ತರಿಸಿ ಬಿಸಾಕಿದರೆ ಬುಡದಲ್ಲಿ ಒಂದು ಬಾಳೆಗೊಣೆ ಕಾಣಿಸಿಕೊಳ್ಳುವ ಮುಖಾಂತರ ಜನರನ್ನು ಮೂಕವಿಸ್ಮಿರಾನ್ನಾಗಿಸಿದೆ.

ಹೌದು ಚಿಕ್ಕಬಳ್ಳಾಪುರ   ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಗ್ರಾಮದ ಅಯ್ಯಪ್ಪನ ಸನ್ನಿಧಾನದ ಆವರಣದಲ್ಲಿ ಬಾಳೆಯ ಬುಡದಲ್ಲಿ ಬಾಳೆಗೊನೆ ಬೆಳೆದಿದೆ. ಹಿಂದೂ-ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳವಾದ ಮುರಗಮಲ್ಲ ಗ್ರಾಮದಲ್ಲಿ ಒಂದೆಡೆ ದರ್ಗಾ ಮತ್ತೊಂದೆಡೆ ಮುಕ್ತೀಶ್ವರನ ದೇವಾಲಯ ಇವೆ. ಇವರೆಡೆರ ನಡುವೆ ಅಯ್ಯಪ್ಪನ ಆಲಯ ಇದೆ. ಅಯ್ಯಪ್ಪನ ಆಲಯದ ಆವರಣದಲ್ಲಿರುವ ಬಾಳೆಯ ಬುಡದಲ್ಲಿ ಈ ವಿಸ್ಮಯ ಕಂಡುಬಂದಿದೆ. ಎರಡು ವರ್ಷಗಳ ಹಿಂದೆ ನಿರ್ಮಾಣವಾದ ಆಯ್ಯಪ್ಪ ಆಲಯದಲ್ಲಿ ಇತ್ತೀಚೆಗೆ ಬಲಮುರಿ ಗಣಪತಿ ಹಾಗೂ ಸುಬ್ರಮಣ್ಯೇಶ್ವರನ ನೂತನ ಗುಡಿ ನಿರ್ಮಿಸಲಾಗಿದೆ. ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಈ ಬಾಳೆ ಗಿಡವನ್ನ ಕಟಾವು ಮಾಡಿ ದೇವರ ಅಲಂಕಾರಕ್ಕೆ ಬಳಸಲಾಗಿತ್ತಂತೆ. ಆದರೆ ಈಗ ಕಟಾವು ಮಾಡಲಾಗಿದ್ದ ಒಣಗಿದ ಬಾಳೆಯ ಬುಡದಲ್ಲೇ ಬಾಳೆಗೊನೆ ಬೆಳೆಯುತ್ತಿದ್ದು, ಅಚ್ಚರಿ ಮೂಡಿಸಿದೆ.

ದೇವಾಲಯದ ಆವರಣದಲ್ಲಿ ಬಾಳೆಯ ಗಿಡಗಳಿದ್ದು, ಅದರಲ್ಲಿ ಇತ್ತೀಚೆಗೆ ದೇವರ ಕಾರ್ಯಕ್ಕೆ ಅಂತ ಬಾಳೆಗಿಡವನ್ನ ಕಟಾವು ಮಾಡಲಾಗಿತ್ತು. ಆದರೆ ಈಗ ಕಟಾವು ಮಾಡಲಾಗಿದ್ದ ಬಾಳೆಯ ಬುಡದಲ್ಲಿ ಹೂವಾಗಿ ಕಾಯಾಗಿ ಬಾಳೆಯ ಗೊನೆ ಬೆಳೆತಿರೋದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇದೆಲ್ಲಾ ಅಯ್ಯಪ್ಪ ನ ಮಹಿಮೆ ಅಂತ  ಇಲ್ಲಿಯ ಜನ ಭಕ್ತಿ ಭಾವದಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಇದು ಪವಾಡವಲ್ಲದೇ ಬೇರೆನು ಅನ್ನಬೇಕು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments