Select Your Language

Notifications

webdunia
webdunia
webdunia
webdunia

ಸಿದ್ಧಾರೂಢ ಮಠದಲ್ಲಿ ವಿಭಿನ್ನವಾಗಿ ನಡೆಯೋದೇನು?

ಸಿದ್ಧಾರೂಢ ಮಠದಲ್ಲಿ ವಿಭಿನ್ನವಾಗಿ ನಡೆಯೋದೇನು?
ಹುಬ್ಬಳ್ಳಿ , ಗುರುವಾರ, 3 ಅಕ್ಟೋಬರ್ 2019 (16:38 IST)
ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಭಿನ್ನ ಸಮಾರಂಭ ಆಯೋಜನೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಾರೂಢ  ಮಠದ ಆವರಣದಲ್ಲಿರುವ ಹತ್ತಿಮತ್ತೂರ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಲಾಗಿದೆ.

ಸಂಘದ 12  ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮಹತ್ಮಾ ಗಾಂಧೀಜಿಯವರ 150 ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಹೀಗಂತ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ ಹೇಳಿದ್ದು, ಜೆಡಿಎಸ್ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಪಿ.ಎಸ್.ಧರಣೆಪನವರ ವಹಿಸಲಿದ್ದಾರೆ ಎಂದಿದ್ದಾರೆ.

ಹಿರಿಯ ನಾಗರಿಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಹಾಗೂ ಗಾಂಧಿ ಸ್ಮೃತಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ನೇರವೇರಿಸುವರು. ಶಾಸಕ ಅರವಿಂದ ಬೆಲ್ಲದ, 80 ವರ್ಷ ದಾಟಿದ ಸಂಘದ 30 ಸದಸ್ಯರಿಗೆ ಸನ್ಮಾನಿಸಲಿದ್ದಾರೆ ಎಂದಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರದುರ್ಗ ಸ್ವಾಮೀಜಿಯ ಫೋನ್ ಟ್ಯಾಪ್ ಗುಮಾನಿ