Webdunia - Bharat's app for daily news and videos

Install App

ಸಿದ್ಧಾರೂಢ ಮಠದಲ್ಲಿ ವಿಭಿನ್ನವಾಗಿ ನಡೆಯೋದೇನು?

Webdunia
ಗುರುವಾರ, 3 ಅಕ್ಟೋಬರ್ 2019 (16:38 IST)
ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಭಿನ್ನ ಸಮಾರಂಭ ಆಯೋಜನೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಾರೂಢ  ಮಠದ ಆವರಣದಲ್ಲಿರುವ ಹತ್ತಿಮತ್ತೂರ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಲಾಗಿದೆ.

ಸಂಘದ 12  ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮಹತ್ಮಾ ಗಾಂಧೀಜಿಯವರ 150 ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಹೀಗಂತ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ ಹೇಳಿದ್ದು, ಜೆಡಿಎಸ್ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಪಿ.ಎಸ್.ಧರಣೆಪನವರ ವಹಿಸಲಿದ್ದಾರೆ ಎಂದಿದ್ದಾರೆ.

ಹಿರಿಯ ನಾಗರಿಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಹಾಗೂ ಗಾಂಧಿ ಸ್ಮೃತಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ನೇರವೇರಿಸುವರು. ಶಾಸಕ ಅರವಿಂದ ಬೆಲ್ಲದ, 80 ವರ್ಷ ದಾಟಿದ ಸಂಘದ 30 ಸದಸ್ಯರಿಗೆ ಸನ್ಮಾನಿಸಲಿದ್ದಾರೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments