Webdunia - Bharat's app for daily news and videos

Install App

ಪ್ರಖ್ಯಾತ ದೇಗುಲದಲ್ಲಿ ‘ಸಂಗಮ’ ಆಗುತ್ತಾ?

Webdunia
ಗುರುವಾರ, 8 ಆಗಸ್ಟ್ 2019 (19:07 IST)
ಉಕ್ಕಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ ನದಿಗಳಿಂದ ಆ ದೇವಾಲಯದಲ್ಲಿ ಸಂಗಮ ಆಗುತ್ತಾ ಅನ್ನೋ ಪ್ರಶ್ನೆ ಭಕ್ತರಿಂದ ಕೇಳಿಬರುತ್ತಿದೆ.

ಐತಿಹಾಸಿಕ ಉಪ್ಪಿನಂಗಡಿ ದೇಗುಲದಲ್ಲಿ ಸಂಗಮದ ನಿರೀಕ್ಷೆ ಮಾಡಲಾಗುತ್ತಿದೆ.

ಮೈದುಂಬಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ- ಕುಮಾರಧಾರ ನದಿಗಳು ಇಂಥದ್ದೊಂದು ಚರ್ಚೆಗೆ ಕಾರಣವಾಗಿದೆ.
ಉಭಯ ನದಿಗಳು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇಗುಲದ ಬಳಿ ಸಂಗಮ ಆಗೋ ಸಾಧ್ಯತೆ ಕಂಡುಬರುತ್ತಿದೆ.

ಐತಿಹಾಸಿಕ ಕ್ಷಣ ನೋಡಲು ಭಕ್ತಾಧಿಗಳು ಕಾತುರರಾಗಿದ್ದಾರೆ. ನೇತ್ರಾವತಿ ನದಿಗಳ ಅಪಾಯದ ಮಟ್ಟ 30.5 ಮೀ 
ಸದ್ಯ 30 ಮೀಟರ್ ನಲ್ಲಿ ಹರಿಯುತ್ತಿದೆ. ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ಕಾಣಿಸುತ್ತಿದೆ ಒಂದು ಮೆಟ್ಟಿಲು.
ಉಭಯ ನದಿಗಳಲ್ಲಿ ಇನ್ನಷ್ಟು ನೀರು ಹರಿದು ಬಂದರೆ ಸಂಗಮ ಸಾಧ್ಯತೆ ದಟ್ಟವಾಗಿದೆ.

ದೇವಾಲಯದ ಆವರಣದೊಳಗಡೆ ನೆರೆ ನೀರು ಪ್ರವೇಶಿಸಿದರೆ ಸಂಗಮ ಆಗುತ್ತದೆ.

ಉಭಯ ನದಿಗಳ ನೀರು ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮುಂಭಾಗಕ್ಕೆ ಬಂದು ಒಂದಕ್ಕೊಂದು ಸಂಧಿಸಿದರೆ ಆಗ ಸಂಗಮ ವಾಗುತ್ತದೆ.

ಸಂಗಮದ ಬಳಿಕ ದೇವಾಲಯದ ವತಿಯಿಂದ ಗಂಗಾಪೂಜೆ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಭಕ್ತರ ಶ್ರದ್ಧಾ ಭಕ್ತಿಯ ಕೇಂದ್ರವಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments