Webdunia - Bharat's app for daily news and videos

Install App

ಕೊರೊನಾ ಪೀಡಿತ ವ್ಯಕ್ತಿ ಸಂಪರ್ಕಕ್ಕೆ ಬಂದವರೆಲ್ಲರ ರಿಪೋರ್ಟ್ ನಲ್ಲೇನಿದೆ?

Webdunia
ಮಂಗಳವಾರ, 28 ಏಪ್ರಿಲ್ 2020 (22:49 IST)
ಕೊರೊನಾ ಪಾಸಿಟಿವ್ ರೋಗಿಯೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಂಟು ಜನರ ಕೋವಿಡ್ – 19 ಪರೀಕ್ಷಾ ವರದಿ ಬಂದಿದೆ.

ಮಂಡ್ಯದ ನಾಗಮಂಗಲ ತಾಲೂಕಿನ ಡಿ‌. ಸಾತೇನಹಳ್ಳಿ ಗ್ರಾಮದ ಸೋಂಕಿತನ ಪ್ರಾಥಮಿಕ ಸಂಪರ್ಕಕ್ಕೆ‌ ಬಂದಿದ್ದ 8 ಜನರ ವರದಿ ನೆಗೆಟಿವ್ ಬಂದಿದ್ದು, ಹಾಸನ‌ ಜಿಲ್ಲಾಡಳಿತ ಹಾಗೂ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಹಸಿರು ವಲಯದ ಜಿಲ್ಲೆ ಹಾಸನಕ್ಕೂ ಕೊರೊನಾ ಸೋಂಕು ಆವರಿಸೋ ಆತಂಕ ಮನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 22 ಗಂಟೆ ಸೋಂಕಿತನ ಜೊತೆಯಲ್ಲಿ ಇದ್ದವರನ್ನು ಪರೀಕ್ಷೆಗೊಳಪಡಿಸಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ.

ಎಂಟು ನೇರ ಸಂಪರ್ಕ, 30 ಸೆಕೆಂಡರಿ ಕಾಂಟಾಕ್ಟ್ ಜನರ ಸ್ವ್ಯಾಬ್ ಪರೀಕ್ಷೆಗೊಳಪಡಿಸಲಾಗಿತ್ತು. 8 ಪ್ರಾಥಮಿಕ ಸಂಪರ್ಕಿತರು ಸೇರಿ ಎಲ್ಲಾ 38 ಜನರ ವರದಿ ನೆಗೆಟಿವ್ ಬಂದಿದೆ. ತೀವ್ರ ಆತಂಕ ಸೃಷ್ಟಿಸಿದ್ದ ನಾಗಮಂಗಲದ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕೇಳಿ ವೈದ್ಯಕೀಯ ವರದಿಯಿಂದ ಅಧಿಕಾರಿಗಳು ಕೊಂಚ ನಿರಾಳವಾಗಿದ್ದಾರೆ.

ವರದಿ ನೆಗೆಟಿವ್ ಬಂದರೂ ಎಲ್ಲರನ್ನೂ ಆಸ್ಪತ್ರೆಯಲ್ಲಿ ಕ್ವಾರಂಟೇನ್ ಮಾಡಿರುವ ಜಿಲ್ಲಾಡಳಿತ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments