Webdunia - Bharat's app for daily news and videos

Install App

ಡಿ ಬಾಸ್ ಪರ ಘೋಷಣೆ ಕೂಗಿದವರ ಕಥೆ ಏನಾಯ್ತು?

Webdunia
ಭಾನುವಾರ, 24 ಮಾರ್ಚ್ 2019 (20:58 IST)
ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಸಭೆಯಲ್ಲಿ ಡಿ ಬಾಸ್ ಘೋಷಣೆ ಕೂಗಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡ ಕೆ ಆರ್ ಪೇಟೆ ಗ್ರಾಮಾಂತರ  ಪೊಲೀಸರು, ಎರಡೂ ಪ್ರಕರಣಗಳಿಂದ 24 ಜನರ ವಿರುದ್ದ ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮೂವರ ಬಂಧನ ಮಾಡಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.
ಕೆ ಆರ್ ಪೇಟೆ ಶಾಸಕ ನಾರಾಯಣಗೌಡ ಕಾರು ಚಾಲಕ ಸುರೇಶ್ ರಿಂದ ದೂರು ದಾಖಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 341, 506, 324, 323, 427  ರಿತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕೆ ಆರ್ ಪೇಟೆ ತಾಲೂಕು ಸೋಮನಹಳ್ಳಿ ಬಳಿ ನಿಖಿಲ್ ರೋಡ್ ಶೋ ನಡೆಸುತ್ತಿದ್ದ ವೇಳೆ ನಿಖಿಲ್ ಬೆಂಬಲಿಗರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಇದಾದ ಬಳಿಕ ಅಕ್ಕಿ ಹೆಬ್ಬಾಳಿನಲ್ಲಿ ಪ್ರಚಾರ ಸಭೆ ವೇಳೆ ಡಿ ಬಾಸ್ ಎಂದು ಅಭಿಮಾನಿಗಳು ಕೂಗಾಟ ನಡೆಸಿದ್ದರಿಂದ ಎರಡೂ ಕಾರ್ಯಕರ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments