Webdunia - Bharat's app for daily news and videos

Install App

3 ಡಿಸಿಎಂ ಬೇಕು ಎನ್ನುವುದರಲ್ಲಿ ತಪ್ಪೇನಿದೆ?

Webdunia
ಬುಧವಾರ, 20 ಸೆಪ್ಟಂಬರ್ 2023 (15:20 IST)
ಸಮುದಾಯವಾರು ಮೂರು ಡಿಸಿಎಂ ಆಗಬೇಕು ಅನ್ನೋ ವಿಚಾರದಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ
K.N.ರಾಜಣ್ಣ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡಿದ್ದೇನೆ. ಅವರಿಗೆ ಸರಿ ಅನ್ಸಿದ್ರೆ ಮಾಡ್ತಾರೆ.. ಬೇಡ ಅಂದ್ರೆ ಬಿಡ್ತಾರೆ ಎಂದು ತಿಳಿಸಿದ್ರು. ಸಿಎಂ ಸಿದ್ದರಾಮಯ್ಯ ಈ ಮಾತನ್ನು ನನ್ನಿಂದ ಹೇಳಿಸ್ತಾ ಇದ್ದಾರೆ ಅನ್ನೋದು ತಪ್ಪು ಕಲ್ಷನೆ ಎಂದು ಸ್ಪಷ್ಟಪಡಿಸಿದ್ರು. ನಾನು ಈ ವಿಚಾರವಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡಿಯೇ ಇಲ್ಲ.. ಮೂರು ಡಿಸಿಎಂಗಳನ್ನು ಆಯ್ಕೆ ಮಾಡಿದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್​ ಪ್ರಾಮುಖ್ಯತೆ ಕಡಿಮೆ ಆಗುತ್ತೆ ಎನ್ನುವುದು ತಪ್ಪು. ಈ ಲೋಕಸಭೆ ಚುನಾವಣೆ ಬಹಳ ಪ್ರಮುಖವಾದುದು.. ಅದರ ಗೆಲುವಿಗಾಗಿ ಈ ಸೂತ್ರ ಹೇಳಿದ್ದೇನೆಯೇ ಹೊರತು, ಬೇರೆ ಯಾವ ಉದ್ದೇಶ ಇಲ್ಲ ಎಂದು ಹೇಳಿದ್ರು. ಇವತ್ತಿನ ಚುನಾವಣಾ ವ್ಯವಸ್ಥೆ ನೋಡಿದಾಗ ಜಾತಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ.. ಆದ್ದರಿಂದ ಸಮುದಾಯವಾರು ಮೂರು ಡಿಸಿಎಂ ಇದ್ರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ.. ಇನ್ನು ನನ್ನ ಹೇಳಿಕೆಯಿಂದ ನಾನು ದೂರ ಸರಿಯೋ ಮಾತಿಲ್ಲ. ಸಮುದಾಯವಾರು ಡಿಸಿಎಂ ಸ್ಥಾನ ನೀಡಬೇಕು ಎಂದು ಪ್ರತಿಪಾದಿಸಿದ್ರು.

ಡಿಸಿಎಂ ಹುದ್ದೆ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು. ಜೊತೆಯಲ್ಲಿ ಹೈಕಮಾಂಡ್ ನಾಯಕರು ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವ K.H.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷರು ಸೇರಿ ಡಿಸಿಎಂ ಬೇಕಾ ಎಂದು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು.. ಹಲವಾರು ರಾಜ್ಯಗಳಲ್ಲಿಯೂ ಹೀಗೆ ಮಾಡಿದ್ದಾರೆ.. ಇಲ್ಲೂ ಕೂಡ ಒಬ್ಬ ಡಿಸಿಎಂ ಇದ್ದಾರೆ.. 3 ಡಿಸಿಎಂ ಮಾಡೋ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments