SC/ST ಗೆ ಬಿಜೆಪಿ ಏನು ಮಾಡಿದೆ?

Webdunia
ಶನಿವಾರ, 11 ಮೇ 2019 (12:32 IST)
ಎಸ್.ಸಿ., ಎಸ್.ಟಿ ವರ್ಗಗಳಿಗೆ ಬಿಜೆಪಿ ಏನು ಮಾಡಿದೆ ಅಂತ ಹೇಳಲಿ. ಈ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಅಂತ ಮಾಜಿ ಸಿಎಂಗೆ, ಮಾಜಿ ಸಿಎಂ ಸವಾಲು ಹಾಕಿದ್ದಾರೆ.

ಬಿಜೆಪಿ ಎಸ್.ಸಿ., ಎಸ್.ಟಿ.ಗೆ ಏನು ಮಾಡಿದೆ ಎಂಬುದನ್ನು ಬಿ.ಎಸ್.ಯಡಿಯೂರಪ್ಪ ಹೇಳಬೇಕು. ಈ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕೋಲಿ ಸಮಾಜವನ್ನು ಎಸ್.ಟಿ.ಗೆ ಶಿಫಾರಸ್ಸು ಮಾಡಿದ್ದು ನಾವು. ಆದ್ರೆ ನರೇಂದ್ರ ಮೋದಿ ಯಾಕೆ ಶಿಫಾರಸ್ಸು ಅಂಗೀಕರಿಸಿ ಎಸ್.ಟಿ. ಮಾಡಲಿಲ್ಲವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಎಸ್.ಟಿ. ಗೆ ಸೇರ್ಪಡೆ ಮಾಡಿಸೋದಾಗಿ ಬಾಬುರಾವ್ ಚಿಂಚನಸೂರ ಹೇಳ್ತಾರೆ. ಚಿಂಚನಸೂರರನ್ನು ಸಚಿವರನ್ನಾಗಿಸಿದ್ದು ಕಾಂಗ್ರೆಸ್. ಆದ್ರೆ ಬಿಜೆಪಿ ಅವರು ಚಿಂಚನಸೂರಗೆ ತಮಟೆ ಹೊಡೆಯೋ ಕೆಲಸ ಕೊಟ್ಟಿದ್ದಾರೆ. ಗೊಂಡ ಸಮಾಜವನ್ನು ಎಸ್.ಟಿ.ಗೆ ಶಿಫಾರಸ್ಸು ಮಾಡಿದವರು ನಾವು. ಆದ್ರೆ ನರೇಂದ್ರ ಮೋದಿ ಅದನ್ನು ಪುರಸ್ಕರಿಸಿಲ್ಲ. ಹೀಗಿರಬೇಕಾದ್ರೆ ಬಿಜೆಪಿಯನ್ನೇಕೆ ಬೆಂಬಲಿಸುತ್ತೀರಿ ಎಂದು ಕೇಳಿದ್ರು.

ಏನೂ ಮಾಡದೇ ಮತ ಕೇಳಿಕೊಂಡು ಬರಲು ನಾಚಿಕೆಯಾಗಬೇಕು ಬಿಜೆಪಿಯವರಿಗೆ ಎಂದು ಸಿದ್ದರಾಮಯ್ಯ, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಕೊಂಚವರಂ ಕಾಂಗ್ರೆಸ್  ಪ್ರಚಾರ ಸಭೆಯಲ್ಲಿ ದೂರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments