Select Your Language

Notifications

webdunia
webdunia
webdunia
webdunia

ದೇವಸ್ಥಾನಕ್ಕೆ 2 ಲಕ್ಷ ರೂ ದೇಣಿಗೆ ನೀಡಿದ ಭಿಕ್ಷುಕಿ...!

ದೇವಸ್ಥಾನಕ್ಕೆ 2 ಲಕ್ಷ ರೂ ದೇಣಿಗೆ ನೀಡಿದ ಭಿಕ್ಷುಕಿ...!
ಮೈಸೂರು , ಸೋಮವಾರ, 20 ನವೆಂಬರ್ 2017 (16:42 IST)
ಅಸಾಮಾನ್ಯ ಘಟನೆಯೊಂದರಲ್ಲಿ ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
 
ಮೈಸೂರು ಅರಮನೆಯ ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ. 
 
ಎಂ.ವಿ.ಸೀತಾ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ.
 
ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹೊಗಳುವ ಭರದಲ್ಲಿ ಜಮೀರ್ ಅಹ್ಮದ್ ಮಾಡಿದ ಯಡವಟ್ಟು..!