Select Your Language

Notifications

webdunia
webdunia
webdunia
webdunia

ದಂಪತಿಯ ಜೋಡಿ ಕೊಲೆ ಕಾರಣ ಏನು?

ದಂಪತಿಯ ಜೋಡಿ ಕೊಲೆ ಕಾರಣ ಏನು?
ಮಂಡ್ಯ , ಭಾನುವಾರ, 4 ಆಗಸ್ಟ್ 2019 (17:15 IST)
ಪಕ್ಕದ ಮನೆಯಲ್ಲಿದ್ದ ದಂಪತಿಯನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಂಡ್ಯ ಜಿಲ್ಲೆಯ ರಾಯಸಮುದ್ರ ಗ್ರಾಮದಲ್ಲಿ ಗುಂಡೇಗೌಡ ಲಲಿತಮ್ಮ ದಂಪತಿ ಜೋಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ.

ಮಂಡ್ಯ ಜಿಲ್ಲೆ  ಕೆ. ಆರ್. ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಯನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು 
ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು
ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ ಬಲರಾಮೇಗೌಡ, ಡಿವೈಎಸ್ ಪಿ ವಿಶ್ವನಾಥ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಅಪರಾಧ ಪತ್ತೆ ಸಿಬ್ಬಂದಿ ಹೆಚ್.ಪ್ರಕಾಶ್, ಬಿ.ಎಸ್.ಚಂದ್ರಶೇಖರ್, ಬಸವರಾಜು, ಪ್ರಶಾಂತಕುಮಾರ್, ರಘು, ಗುರುಪ್ರಸಾದ್, ಚಾಲಕರಾದ ಮಂಜುನಾಥ ಮತ್ತು  



Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ-ಸಿಎಂ ಯಡಿಯೂರಪ್ಪ