Select Your Language

Notifications

webdunia
webdunia
webdunia
webdunia

ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದೇನು? ಶಾಕಿಂಗ್

ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದೇನು? ಶಾಕಿಂಗ್
ಚಿಕ್ಕಬಳ್ಳಾಪುರ , ಭಾನುವಾರ, 19 ಮೇ 2019 (13:56 IST)
ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಜನರು ಜೀವ ಭಯದಲ್ಲಿದ್ದಾರೆ.

ಚಿಕ್ಕಬಳ್ಳಾಪುರದ ಮುರಗಮಲ್ಲ ಕ್ಷೇತ್ರದಲ್ಲಿ ಚಿರತೆ ಪ್ರತ್ಯಕ್ಷ ವಾಗಿವೆ. ಮುಸ್ಲಿಂರ ಪವಿತ್ರಾ ಯಾತ್ರಾ ಸ್ಥಳ ಮುರಗಮಲ್ಲ ನಲ್ಲಿ ಚಿರತೆ ಚಲನವಲನ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.  

ಚಿರತೆಯನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಯುವಕರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರಗಮಲ್ಲನಲ್ಲಿ ಈ ಘಟನೆ ನಡೆದಿದೆ. ಚಿರತೆಯನ್ನು ಕಂಡ ಯತ್ರಾರ್ಥಿಗಳು ಭಯಭೀತರಾಗಿದ್ದಾರೆ.

ಮುರಗಮಲ್ಲ ಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ ಕಂಡು ಜೀವಭಯದಲ್ಲಿ ಸ್ಥಳೀಯರಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ‌ ನಡೆಸಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರವಹಿಸುವಂತೆ ಮನವಿ ಮಾಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಉಪ ಕದನದಲ್ಲಿ ಭರ್ಜರಿ ಮತದಾನ; ಶೇ. 75 ನಿರೀಕ್ಷೆ