Webdunia - Bharat's app for daily news and videos

Install App

ವಿಡಿಯೋ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಏನಾಗಬಹುದು

Krishnaveni K
ಸೋಮವಾರ, 3 ಜೂನ್ 2024 (09:00 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಜೂನ್ 6 ರವರೆಗೆ ಅವರು ಎಸ್ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ ಗೆಲುವಿನ ಆಶಾಕಿರಣವಿದೆ.

ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿದಿದ್ದಾರೆ. ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಆದರೆ ಹಾಸನ ದೇವೇಗೌಡರ ಕುಟುಂಬದ ಪ್ರಬಲ ಹಿಡಿತವಿರುವ ಕ್ಷೇತ್ರ.

ಚುನಾವಣೆ ವೇಳೆ ಪ್ರಜ್ವಲ್ ಮೇಲೆ ಅಪವಾದ ಬಹಿರಂಗವಾಗಿರಲಿಲ್ಲ. ಹೀಗಾಗಿ ಇಲ್ಲಿ ಪ್ರಜ್ವಲ್ ಗೆಲ್ಲಲುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಆದರೆ ಅವರ ಗೆಲುವಿನಿಂದಾಗಿ ಅವರ ಮೇಲಿನ ಆರೋಪಗಳ ವಿಚಾರಣೆಗೆ ತೊಂದರೆಯಾದರೂ ಅಚ್ಚರಿಯಿಲ್ಲ. ಇದಕ್ಕಾಗಿ ಫಲಿತಾಂಶಕ್ಕೆ ಮೊದಲೇ ಪ್ರಜ್ವಲ್ ಬಾಯಿ ಬಿಡಿಸಲು ಎಸ್ಐಟಿ ಅಧಿಕಾರಿಗಳು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಗೆಲುವಿನ ನಂತರ ಅವರ ಕೇಸ್ ಹಳ್ಳ ಹಿಡಿಯದಂತೆ ಎಚ್ಚರಿಕೆ ವಹಿಸಬೇಕಿದೆ. ಇತ್ತ ಪ್ರಜ್ವಲ್ ಗೂ ತಾವು ಗೆದ್ದರೆ ಸಂಕಷ್ಟದ ಸಮಯದಲ್ಲೂ ಆನೆಬಲ ಬಂದಂತಾಗುತ್ತದೆ.  ಒಂದು ವೇಳೆ ಪ್ರಜ್ವಲ್ ಗೆದ್ದರೂ ಸಂಭ್ರಮಿಸಲಾಗದಂತೆ ಇಕ್ಕಟ್ಟಿನಲ್ಲಿ ಜೆಡಿಎಸ್ ನಾಯಕರು ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ