Webdunia - Bharat's app for daily news and videos

Install App

ಹಳ್ಳಿಗಳ ಕಡೆ ಹೋಗೋದಕ್ಕೆ ನಿಮಗೇನು ದಾಡಿ: ಅಧಿಕಾರಿಗಳ ವಿರುದ್ಧ ಸಿಎಂ ಗರಂ

Webdunia
ಸೋಮವಾರ, 27 ಜೂನ್ 2016 (13:27 IST)
ಗ್ರಾಮಗಳಲ್ಲಿ ರಸ್ತೆಯಿದೆ, ಕಾರು ಇದೆ, ಕಾರಲ್ಲಿ ಎಸಿಯಿದ್ದರೂ ಹಳ್ಳಿಗಳ ಕಡೆ ಹೋಗೋದಕ್ಕೆ ನಿಮಗೇನು ದಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ದ ಗರಂ ಆಗಿದ್ದಾರೆ. 
 
ಕಲ್ಲಿನ ಗೋಡೆಗಳು ಮದ್ದೆ ಎಸಿ ರೂಮಿನಲ್ಲಿ ಕೂಡಬೇಡಿ ಎಸಿ ರೂಮಿನಿಂದ ಹೊರಬಂದು ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಎಂದು ಗುಡುಗಿದ್ದಾರೆ.   
 
ಬ್ರಿಟಿಷರ ಕಾಲದಲ್ಲಿ ಅಮುಲದಾರರು ಎನ್ನುವವರಿದ್ದರು. ಕುದುರೆ ಮೇಲೆ ಹೋಗಿ ಜನರ ಯೋಗಕ್ಷೇಮ ವಿಚಾರಿಸಿಕೊಳ್ಳುತ್ತಿದ್ದರು. ನಿಮಗೆ ಎಸಿ ಕಾರಿದ್ದರೂ ಕೂಡಾ ಜನರ ಯೋಗ ಕ್ಷೇಮ ವಿಚಾರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
 
ನೀವು ಕೆಲಸ ಮಾಡದಿದ್ದರಿಂದ ಅದರ ಬಿಸಿ ಚುನಾವಣೆಯಲ್ಲಿ ನಮಗೆ ತಟ್ಟುತ್ತದೆ. ಜನರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಯೋಜನೆಗಳಿಗೆ ಅಧಿಕಾರಿಗಳೇ ಕೊಕ್ಕೆ ಹಾಕುತ್ತಾರೆ ಎನ್ನುವ ಟೀಕೆಯಿದೆ. ಅಂತಹ ಆರೋಪಿಗಳನ್ನು ದೂರ ಮಾಡಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಸಲಹೆ ನೀಡಿದರು.
 
ಜಿಲ್ಲೆಯ ಯಾವುದೇ ಸಮಸ್ಯೆಗಳಿಗೆ ಡಿಸಿಗಳು ನೇರ ಹೊಣೆಯಾಗಿರುತ್ತಾರೆ. ಜಿಲ್ಲಾಧಿಕಾರಿಗಳು ಮುಂಬರುವ ದಿನಗಳಲ್ಲಿ ತಮ್ಮ ಎಂದಿನಂತೆ ಆಲಸ್ಯವನ್ನು ತೋರಿದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಮುಂದಿನ ಸುದ್ದಿ
Show comments