Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ದಿನಾಂಕ ನಿಗದಿ ಯಾವಾಗ?

Webdunia
ಗುರುವಾರ, 7 ಅಕ್ಟೋಬರ್ 2021 (20:40 IST)
ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಡುವ ಮುನ್ಸೂಚನೆಗಳು ಕಂಡು ಬರುತ್ತಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ನಾಲ್ಕು ವಾರಗಳ ನಂತರ ಬಿಬಿಎಂಪಿ ಚುನಾವಣೆ ವಿಚಾರಣೆಯನ್ನು ಕೈಗೆತ್ತಿಕೊಂಡು ಅಂತಿಮ ತೀರ್ಪು ನೀಡುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬರುವ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ.
 
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾಕೊಹ್ಲಿ ನೇತೃತ್ವದ ತ್ರಿಸದಸ್ಯ ಪೀಠ ನಿನ್ನೆ ಬಿಬಿಎಂಪಿ ಚುನಾವಣೆ ಸಂಬಂಧ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ಪರ ವಕೀಲರು ಹಾಗೂ ಪ್ರತಿವಾದಿಗಳಾದ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್ ಮತ್ತು ಅಬ್ದುಲ್ ವಾಜಿದ್ ಪರ ವಕೀಲರನ್ನು ವೀಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿತ್ತು.
 
ಈ ಸಂದರ್ಭದಲ್ಲಿ ಪ್ರತಿವಾದಿ ವಕೀಲರ ವಾದ ಆಲಿಸಿದ ನ್ಯಾಯಪೀಠ ನಾಲ್ಕು ವಾರಗಳ ನಂತರ ಬಿಬಿಎಂಪಿ ಚುನಾವಣೆ ಮುಂದೂಡಿಕೆ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿ ಅಂತಿಮ ತೀರ್ಪು ನೀಡುವುದಾಗಿ ಭರವಸೆ .
ಹೀಗಾಗಿ ಕಳೆದ ಒಂದು ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಆಶಾಭಾವನೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments