Webdunia - Bharat's app for daily news and videos

Install App

ಮಳೆ ನಿಂತು ಹೋದ ಮೇಲೆ…

Webdunia
ಗುರುವಾರ, 12 ಸೆಪ್ಟಂಬರ್ 2019 (14:52 IST)
ಮಳೆ ನಿಂತರೂ ನಿಲ್ಲುತ್ತಿಲ್ಲ ಕಣ್ಣೀರ ಧಾರೆ. ಬದುಕನ್ನೆ ಬೀದಿಗೆ ತಳ್ಳಿದ ಕೃಷ್ಣಾ ನದಿಗೆ ಸಂತ್ರಸ್ಥರು ಹಿಡಿಶಾಪ ಹಾಕುವಂತಾಗಿದೆ.

ಕಳೆದ ತಿಂಗಳ ಹಿಂದಷ್ಟೇ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿ ಸುರಿದ ಭಾರಿ ಮಳೆಯಿಂದಾಗಿ ಸುನಾಮಿಯಂತೆ  ಅಪ್ಪಳಿಸಿ ಹಲವು ಗ್ರಾಮಗಳನ್ನು ಪ್ರವಾಹ ಪೀಡಿತವಾಗಿಸಿದ್ದ ಕೃಷ್ಣಾ ನದಿಯ ಒಳ ಹರಿವು ನಿಧಾನಕ್ಕೆ ಕಡಿಮೆ ಆಗತೊಡಗಿದೆ.

ಆದರೆ ಚಿಕ್ಕೋಡಿ ವ್ಯಾಪ್ತಿಯ 81 ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮಾತ್ರ ಮಡುಗಟ್ಟಿದ ದುಃಖ. ಸಂತ್ರಸ್ಥರ ಮುಖದಲ್ಲಿ ಇನ್ನೂ ಬತ್ತದ ಆತಂಕದ ಛಾಯೆ, ಯಾರಾದರೂ ಮಾತನಾಡಿಸಿರೂ ಸಾಕು ತೇವಗೊಳ್ಳುವ ಕಣ್ಣುಗಳು. ಇದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೊಡ್ಡವಾಡ, ಪಿ ಕೆ ನಾಗನೂರು, ದರೂರ, ಖವಟಕೊಪ್ಪ, ಅವರಕೋಡ, ಹುಲಗಬಾಳ ಗ್ರಾಮಗಳ ವ್ಯಥೆಯ ಕತೆ.

ಇದ್ದ ಮನೆಗಳೂ ಬಿದ್ದು ಹೋಗಿ ಸದ್ಯ ಅತಂತ್ರವಾದ ಸಂತ್ರಸ್ತರಿಗೆ ಮುಂದೇನು? ಅನ್ನುವ ಚಿಂತೆ ಕಾಡುತ್ತಿದ್ದು ಅಧಿಕಾರಿಗಳ ಆಮೆಗತಿಯ ಕಾರ್ಯಾಚರಣೆಯಿಂದಾಗಿ ಹಲವು ಕುಟುಂಬಗಳು ಇನ್ನೂ ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ.
ಇನ್ನೂ ಬಹುತೇಕ ಗ್ರಾಮಗಳಲ್ಲಿ ನೂರಾರು ಮನೆಗಳು ಬಿದ್ದು ಹೋಗಿವೆ. ಸರ್ಕಾರ ಕೊಟ್ಟ ಹತ್ತು ಸಾವಿರ ರೂಪಾಯಿ ಚೆಕ್ಕುಗಳು ಕೂಡ ಜಮೆಯಾಗದೆ ಸಂತ್ರಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಸ್ಥಿತಿ ಶತ್ರುಗಳಿಗೂ ಬೇಡ. ನಮ್ಮನ್ನು ಸಂಪೂರ್ಣ ಸ್ಥಳಾಂತರ ಮಾಡಿ ಪುಣ್ಯ ಕಟ್ಟಿಕೊಳ್ಳಿ. ಉಕ್ಕಿ ಹರಿದ ನದಿಯಿಂದಾಗಿ ಮಕ್ಕಳ ವಿದ್ಯಾಬ್ಯಾಸಕ್ಕೂ ತೊಂದರೆ ಆಗಿದೆ. ಮನೆಗಳು ಬಿದ್ದು ಹೋಗಿದ್ದು ಆಸರೆಯೂ ಇಲ್ಲದಂತಾಗಿದೆ. ಯಾರು ಬಂದು ಹೋದರೂ ನಮ್ಮ ಸಂಕಷ್ಟ ಮಾತ್ರ ಕಮ್ಮಿ ಆಗುತ್ತಿಲ್ಲ ನಮಗೆ ಶಾಶ್ವತ ಪರಿಹಾರ ಕಲ್ಪಿಸಿ ಅನ್ನುತ್ತಾರೆ ಸಂತ್ರಸ್ಥರು.



 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments