ಮಳೆ ನಿಂತು ಹೋದ ಮೇಲೆ…

Webdunia
ಗುರುವಾರ, 12 ಸೆಪ್ಟಂಬರ್ 2019 (14:52 IST)
ಮಳೆ ನಿಂತರೂ ನಿಲ್ಲುತ್ತಿಲ್ಲ ಕಣ್ಣೀರ ಧಾರೆ. ಬದುಕನ್ನೆ ಬೀದಿಗೆ ತಳ್ಳಿದ ಕೃಷ್ಣಾ ನದಿಗೆ ಸಂತ್ರಸ್ಥರು ಹಿಡಿಶಾಪ ಹಾಕುವಂತಾಗಿದೆ.

ಕಳೆದ ತಿಂಗಳ ಹಿಂದಷ್ಟೇ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿ ಸುರಿದ ಭಾರಿ ಮಳೆಯಿಂದಾಗಿ ಸುನಾಮಿಯಂತೆ  ಅಪ್ಪಳಿಸಿ ಹಲವು ಗ್ರಾಮಗಳನ್ನು ಪ್ರವಾಹ ಪೀಡಿತವಾಗಿಸಿದ್ದ ಕೃಷ್ಣಾ ನದಿಯ ಒಳ ಹರಿವು ನಿಧಾನಕ್ಕೆ ಕಡಿಮೆ ಆಗತೊಡಗಿದೆ.

ಆದರೆ ಚಿಕ್ಕೋಡಿ ವ್ಯಾಪ್ತಿಯ 81 ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮಾತ್ರ ಮಡುಗಟ್ಟಿದ ದುಃಖ. ಸಂತ್ರಸ್ಥರ ಮುಖದಲ್ಲಿ ಇನ್ನೂ ಬತ್ತದ ಆತಂಕದ ಛಾಯೆ, ಯಾರಾದರೂ ಮಾತನಾಡಿಸಿರೂ ಸಾಕು ತೇವಗೊಳ್ಳುವ ಕಣ್ಣುಗಳು. ಇದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೊಡ್ಡವಾಡ, ಪಿ ಕೆ ನಾಗನೂರು, ದರೂರ, ಖವಟಕೊಪ್ಪ, ಅವರಕೋಡ, ಹುಲಗಬಾಳ ಗ್ರಾಮಗಳ ವ್ಯಥೆಯ ಕತೆ.

ಇದ್ದ ಮನೆಗಳೂ ಬಿದ್ದು ಹೋಗಿ ಸದ್ಯ ಅತಂತ್ರವಾದ ಸಂತ್ರಸ್ತರಿಗೆ ಮುಂದೇನು? ಅನ್ನುವ ಚಿಂತೆ ಕಾಡುತ್ತಿದ್ದು ಅಧಿಕಾರಿಗಳ ಆಮೆಗತಿಯ ಕಾರ್ಯಾಚರಣೆಯಿಂದಾಗಿ ಹಲವು ಕುಟುಂಬಗಳು ಇನ್ನೂ ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ.
ಇನ್ನೂ ಬಹುತೇಕ ಗ್ರಾಮಗಳಲ್ಲಿ ನೂರಾರು ಮನೆಗಳು ಬಿದ್ದು ಹೋಗಿವೆ. ಸರ್ಕಾರ ಕೊಟ್ಟ ಹತ್ತು ಸಾವಿರ ರೂಪಾಯಿ ಚೆಕ್ಕುಗಳು ಕೂಡ ಜಮೆಯಾಗದೆ ಸಂತ್ರಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಸ್ಥಿತಿ ಶತ್ರುಗಳಿಗೂ ಬೇಡ. ನಮ್ಮನ್ನು ಸಂಪೂರ್ಣ ಸ್ಥಳಾಂತರ ಮಾಡಿ ಪುಣ್ಯ ಕಟ್ಟಿಕೊಳ್ಳಿ. ಉಕ್ಕಿ ಹರಿದ ನದಿಯಿಂದಾಗಿ ಮಕ್ಕಳ ವಿದ್ಯಾಬ್ಯಾಸಕ್ಕೂ ತೊಂದರೆ ಆಗಿದೆ. ಮನೆಗಳು ಬಿದ್ದು ಹೋಗಿದ್ದು ಆಸರೆಯೂ ಇಲ್ಲದಂತಾಗಿದೆ. ಯಾರು ಬಂದು ಹೋದರೂ ನಮ್ಮ ಸಂಕಷ್ಟ ಮಾತ್ರ ಕಮ್ಮಿ ಆಗುತ್ತಿಲ್ಲ ನಮಗೆ ಶಾಶ್ವತ ಪರಿಹಾರ ಕಲ್ಪಿಸಿ ಅನ್ನುತ್ತಾರೆ ಸಂತ್ರಸ್ಥರು.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಮುಂದಿನ ಸುದ್ದಿ
Show comments