Select Your Language

Notifications

webdunia
webdunia
webdunia
webdunia

ಕಪ್ಪು ಹಣ ಇಲ್ಲದಿದ್ರೆ ಐಟಿ ದಾಳಿಗೆ ಏಕೆ ಹೆದರಬೇಕು: ದೇವೇಗೌಡ

ಕಪ್ಪು ಹಣ ಇಲ್ಲದಿದ್ರೆ ಐಟಿ ದಾಳಿಗೆ ಏಕೆ ಹೆದರಬೇಕು: ದೇವೇಗೌಡ
ಮೈಸೂರು , ಗುರುವಾರ, 22 ಡಿಸೆಂಬರ್ 2016 (14:12 IST)
ನಮ್ಮ ಬಳಿ ಕಪ್ಪು ಹಣ ಇಲ್ಲದಿದ್ರೆ ಐಟಿ ದಾಳಿಗೆ ಏಕೆ ಹೆದರಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪರೋಕ್ಷವಾಗಿ ಕಾಂಗ್ರೆಸ್‌ಗೆ ಟಾಂಗ್ ನೀಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ನಮ್ಮ ಮನೆಯ ಮೇಲೆಯೂ ದಾಳಿ ಮಾಡಲಿ. ನಮ್ಮ ಬಳಿ ಕಪ್ಪು ಹಣ ಇಲ್ಲದಿದ್ದರೆ ನಾವೇಕೆ ಹೆದರಬೇಕು ಎಂದು ಪ್ರಶ್ನಿಸಿದರು.
 
ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ದೂರುತ್ತೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿ ದೂರುತ್ತೆ. ಎರಡು ರಾಷ್ಟ್ರೀಯ ಪಕ್ಷಗಳ ಹಣೆಬರವೆ ಇಷ್ಟು ಎಂದು ಬೇಸರ ವ್ಯಕ್ತಪಡಿಸಿದರು.
 
ಬರಸ್ಥಿತಿ ಕುರಿತು ಚರ್ಚೆ ನಡೆಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಅವರು ಅವಕಾಶ ನೀಡಲಿಲ್ಲ ಎಂದು ದೂರುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾನವ ಕಳ್ಳ ಸಾಗಾಣಿಕೆ ದಂಧೆ ಬೆನ್ನುಮೂಳೆ ಮುರಿದ ನೋಟು ನಿಷೇಧ