Webdunia - Bharat's app for daily news and videos

Install App

Gruhalakshmi: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

Krishnaveni K
ಬುಧವಾರ, 4 ಜೂನ್ 2025 (10:57 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಂದಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಈ ನಡುವೆ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ.

ಫೆಬ್ರವರಿ ತಿಂಗಳಿನಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಬಹುತೇಕ ಸಚಿವರು ಕಾರಣ ಕೇಳಿದರೆ ಒಂದೊಂದು ಸಬೂಬು ಹೇಳುತ್ತಲೇ ಇದ್ದಾರೆ. ಆದರೆ ಹಣ ಮಾತ್ರ ಇನ್ನೂ ಬಂದಿಲ್ಲ ಎಂದು ಮಹಿಳೆಯರು ಹಿಡಿ ಶಾಪ ಹಾಕುತ್ತದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಘೋಷಿಸಿದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ಕುಟುಂಬದ ಯಜಮಾನಿ ಖಾತೆಗೆ 2,000 ರೂ. ಪ್ರತೀ ತಿಂಗಳು ಜಮೆ ಮಾಡಲಾಗುವುದು. ಆದರೆ ಇದು ಸರಿಯಾಗಿ ತಿಂಗಳಾ ತಿಂಗಳು ಜಮೆ ಆಗುತ್ತಿಲ್ಲ ಎಂಬ ಆಕ್ರೋಶ ಜನರಲ್ಲಿದೆ.

ಇದೀಗ ಮೂರು ತಿಂಗಳ ಬಾಕಿ ಹಣ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ. ಏಪ್ರಿಲ್ ತಿಂಗಳ ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳಿನದ್ದು ಇಯರ್ ಎಂಡ್ ಆಗಿರುವುದರಿಂದ ಅಡಚಣೆಯಾಗಿದೆ. ಆದಷ್ಟು ಬೇಗ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸಚಿವೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments