Publish Date: Sat, 23 May 2026 (19:06 IST)
Updated Date: Sat, 23 May 2026 (19:08 IST)
ಬೆಂಗಳೂರು: ಎಲ್ಲಾ ಹೊರೆಯನ್ನು ಜನರ ಮೇಲೆ ಹಾಕುತ್ತಿರುವ ನರೇಂದ್ರ ಮೋದಿಯವರು ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆಂದು ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 10 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿರುವ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.
ಬೇರೆಲ್ಲ ಕಡೆ ಮಾತನಾಡುವ ಬಿಜೆಪಿ ನಾಯಕರು, ಬೆಲೆ ಏರಿಕೆಗೆ ಉತ್ತರ ನೀಡುತ್ತಿಲ್ಲ. ಮೊನ್ನೆ ಯಾವುದೇ ರೀತಿ ತೊಂದರೆ ಆಗಿಲ್ಲ ಅಂದ್ರು ರಷ್ಯಾದಿಂದ ಬಹಳ ಕಡಿಮೆ ಬೆಲೆಯಲ್ಲಿ ತೈಲ ತಗೊಂಡ್ವಿ ಅಂದ್ರು, ಮೋದಿ ಅವರು ಇರೋ ಬರೋ ದೇಶವೆಲ್ಲ ಸುತ್ತಿದ್ದಾರೆ. ಹಾಗದರೆ ದೇಶಕ್ಕೆ ಒಳ್ಳೆದಾಗಿದೆ ಅಂತಾ ಯಾಕೆ ಹೇಳಿದ್ರು ಇದಕ್ಕೆಲ್ಲಾ ಯಾರು ಕಾರಣ ಎಂದು ಪ್ರಶ್ನೆ ಮಾಡಿದರು.
ವಾರಕ್ಕೆ ಮೂರು ಬಾರಿ ಬೆಲೆ ಏರಿಕೆ ಮಾಡುವ ಇವರ ನೀತಿಗಳು ಹೇಗೆ ವಿಫಲವಾಗಿದೆ ಎಂದು ತಿಳಿದುಬದಿದೆ. ದೇಶದ ಆರ್ಥಿಕತೆ ಸಂಪೂರ್ಣ ಕುಸಿದಿದೆ. ನಮ್ಮ ಸರ್ಕಾರ ಇದ್ದಾಗ ಯುದ್ದಗಳು ಆಗಿಲ್ಲವಾ, ಈ ಪ್ರಶ್ನೆ ಮೊದಲು ಮೋಹನ್ ಭಗವತ್ ಅವರಿಗೆ ಕೇಳಬೇಕು ಎಂದು ಕುಟುಕಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ