Webdunia - Bharat's app for daily news and videos

Install App

ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣ ಎಲ್ಲಿಗೆ ಬಂತು?

Webdunia
ಶುಕ್ರವಾರ, 17 ಮೇ 2019 (13:00 IST)
ಇಡೀ ರಾಜ್ಯವನ್ನು ಬೆಚ್ಚಿಬೀಳಿಸುವಂತೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಪೊಲೀಸರು.  
ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಆರೋಪ ಸಾಬೀತುಪಡಿಸಿದ್ದಾರೆ ಚಿಂತಾಮಣಿ ನಗರ ಪೊಲೀಸರು.
ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಚಿಂತಾಮಣಿ ಡಿವೈಎಸ್ಪಿ ಶ್ರೀನಿವಾಸ್.  

ಗಂಗಮ್ಮ ದೇವಿ ದೇವಸ್ಥಾನದಲ್ಲಿ ವಿಷ ಪ್ರಸಾದ ಹಂಚಿಕೆ ಹಿನ್ನೆಲೆಯಲ್ಲಿ ದುರ್ಘಟನೆ ನಡೆದಿತ್ತು. ಚಿಂತಾಮಣಿ ನಗರದ ನಾರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಸ್ಥಾನದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರನ್ನು ಬಲಿ ಪಡೆದಿತ್ತು ವಿಷ ಪ್ರಸಾದ. ಎಂಟು ಜನ ಭಕ್ತಾಧಿಗಳು ಅಸ್ವಸ್ಥರಾಗಿದ್ದರು.

ಜನವರಿ ಇಪ್ಪತೈದರಂದು ದೇವಸ್ಥಾನದಲ್ಲಿ ವಿಷ ಪ್ರಸಾದ ಹಂಚಿಕೆಯಾಗಿತ್ತು. ಅಕ್ರಮ ಸಂಭಂದದ ಹಿನ್ನೆಲೆಯಲ್ಲಿ ವಿಷ ಬೆರೆಸಿರುವುದಾಗಿ ದೂರು ದಾಖಲಾಗಿತ್ತು. ಪೊಲೀಸರಿಗೆ ಸಮಗ್ರ ತನಿಖೆಗೆ ಆದೇಶಿಸಿತ್ತು ನ್ಯಾಯಾಲಯ. ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮೀ, ಲೋಕೇಶ್, ಪಾರ್ವತಮ್ಮ , ಅಮರಾವತಿ ವಿರುದ್ಧ ದೋಷಾರೋಪ ಸಲ್ಲಿಸಿದ್ದಾರೆ ಪೊಲೀಸರು.
ಲಕ್ಷ್ಮಿ ಮತ್ತು ಲೋಕೇಶ ನಡುವಿನ ಅಕ್ರಮ ಸಂಭಂದವೇ ಪ್ರಕರಣದ ಪ್ರಮುಖ ಕಾರಣ ಎಂದು ಪೊಲೀಸ್ ವಿಚಾರಣೆಯಲ್ಲಿ ಅಂತಿಮ ಗೊಂಡಿದೆ ಎನ್ನಲಾಗಿದೆ.

ಇನ್ನುಳಿದ ಮೂವರು ಆರೋಪಿಗಳು ಈ ಕೃತ್ಯಕ್ಕೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಕಂಬಿ ಎಣಿಸಬೇಕಾಗಿದೆ . ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿದೆ ಗಂಗಮ್ಮ ದೇವಸ್ಥಾನ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments